ಶನಿವಾರ, ಜನವರಿ 11, 2025
ಪೂಜ್ಯ. ಶ್ರೀ. ಷ.ಬ್ರ. ಡಾ.ಚೆನ್ನವೀರ ಶಿವಾಚಾರ್ಯರು
ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು ಎಂದು ಭಕ್ತರ ಪ್ರೀತಿ ಪಾತ್ರಕ್ಕೆ ಒಳಗಾಗಿ, ಅಪಾರ ಕನ್ನಡ ಮತ್ತು ಸಂಸ್ಕೃತ ಭಾಷಾ ಪಾಂಡಿತ್ಯ ಹೊಂದಿ, ನಿರ್ಮಲ ಮನಸ್ಸಿನಿಂದ ಸದಾ ಒಂದಿಲೊAದು ರೀತಿಯ ಸಾಮಾಜಿಕ ಕಳಕಳಿ ಉಳ್ಳ ಮಠಾಧೀಶರು ಹಾಗೂ ಸಾಹಿತಿಗಳಾಗಿ ನಾಡಿನಾದ್ಯಂತ ಚಿರಪರಿಚಿತರಾದವರೆಂದರೆ ಪೂಜ್ಯ. ಶ್ರೀ.ಷ.ಬ್ರ.ಡಾ.ಚೆನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು. ಇವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ವೇದಮೂರ್ತಿ.ಶ್ರೀ. ಕರಬಸಯ್ಯಾ ಹಿರೇಮಠ ಮತ್ತು ಸುಭದ್ರಾಬಾಯಿ ತಾಯಿಯವರ ಉದರದಲ್ಲಿ ದಿನಾಂಕ ೧-೭-೧೯೬೩ರಲ್ಲಿ ಜ£ಸಿದ್ದಾರೆ. ಇವರ ಮೂಲನಾಮ ರೇವಣಸಿದ್ದಯ್ಯ ಎಂದಾಗಿದೆ. ಶ್ರೀಗಳು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹಾರಕೂಡದಲ್ಲಿ, ಪ್ರೌಢ ಶಿಕ್ಷಣ, ಶರಣಬಸವೇಶ್ವರ ಪ್ರೌಢ ಶಾಲೆ ಕಲಬುರಗಿಯಲ್ಲಿ, ಪದವಿಯನ್ನು ೧೯೮೪ರಲ್ಲಿ ಬೆಳಗಾವಿಯ ಕೆ.ಎಲ್.ಇ.ಶಿಕ್ಷಣ ಸಂಸ್ಥೆಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ ಪೂರೈಸಿ ೧೯೮೬ರಲ್ಲಿ ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎ.ಸ್ನಾತಕೋತ್ತರ ಪದವಿ ಪಡೆದ ಇವರಿಗೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಶ್ರೀ ಗಂಗಾಧರ ರಾಜಯೋಗಿಂದ್ರ ಜಗದ್ಗುರುಗಳು ಅತ್ಯಾನಂದದಿAದ ಶ್ರೀಮಠದಲ್ಲಿ ಪೂಜಾ ಪ್ರಸಾದಕ್ಕೆ ಅನುಕೂಲ ಮಾಡಿಕೊಡುವುದರೊಂದಿಗೆ ಉತ್ತಮ ಆಚಾರ-ವಿಚಾರ, ಚಿಂತನೆಗಳು ಬೋಧಿಸಿ, ಪರಿಸರ ಪ್ರಜ್ಞೆ, ಧರ್ಮ ಶಿಕ್ಷಣ, ಸಂಸ್ಕೃತಿ ಸಂವರ್ಧನೆ ಬಲಪಡಿಸುವುದರ ಮೂಲಕ ೧೯೯೬ ಎಪ್ರಿಲ್ ೨೫ರಂದು ಹಾರಕೂಡ ಹಿರೇಮಠ ಸಂಸ್ಥಾನಕ್ಕೆ ಪಟ್ಟಾಧಿಕಾರ ಹೊಂದಿ ಶ್ರೀ ರೇವಣಸಿದ್ದ ದೇವರು ಶ್ರೀ ಷಟಸ್ಥಲ ಬ್ರಹ್ಮ. ಚೆನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳಾಗಿ ದಕ್ಷಿಣ ಭಾರತದಲ್ಲಿಯೆ ಕೋಟಿ ಕೋಟಿ ಭಕ್ತರ ಪ್ರೀತಿಯ ಸ್ವಾಮಿಗಳಾಗಿ ಹೆಸರುವಾಸಿಯಾಗಿದ್ದಾರೆ.
ಶ್ರೀಮಠದ ಏಳಿಗೆಯೊಂದಿಗೆ ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ ಪ್ರೇಮಿಯಾಗಿ ‘ಚೆನ್ನ ಚಿಂತನ’ ಎಂಬ ಪುಸ್ತಕದಿಂದ ಲೇಖಕರಾಗಿ ಖ್ಯಾತರಾಗಿದ್ದಾರೆ. ತುಂಬ ಮೌಲಿಕ ವಿಚಾರಗಳು ಹೊಂದಿರುವ ಈ ಕೃತಿ ಪ್ರಜಾವಾಣಿಯ ಅಂಕಣ ಬರಹವಾಗಿ ಅಪಾರ ಜನಮೆಚ್ಚುಗೆಯು ಗಳಿಸಿದೆ. ಮತ್ತು ‘ಹಡಪದ ಅಪ್ಪಣ್ಣನ ನೂರೊಂದು ವಚನಗಳು’ (ಸಂಪಾದನೆ) ಮತ್ತು ‘ಚನ್ನಚಂದ್ರಾಹಾರ’ (ಕವನ ಸಂಕಲನ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಧರ್ಮ, ಸಮಾಜ, ಶಿಕ್ಷಣ ಮತ್ತು ಸಾಹಿತ್ಯದೊಂದಿಗೆ ನಿಕಟ ಸಂಬAಧ ಹೊಂದಿರುವುದರಿಂದ ಧಾರ್ಮಿಕ ತಳಹದಿಯಲ್ಲಿ ಚಿಂಚೋಳಿ, ದುಬಲಗುಂಡಿ, ಸೇಡೊಳ್ ಸರಜವಳಗಾ, ಗದಲೇಗಾಂವ, ತರೂರಿ, ಜೀವಣಗಿ ಶಾಖಾ ಮಠಗಳೊಂದಿಗೆ ಭಕ್ತರ ಒಡನಾಡಿಯಾಗಿ ಗುರುತಿಸಿಕೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿಯೂ ತುಂಬ ಕಾಳಜಿ ಹೊಂದಿದ ಶ್ರೀಗಳು ಹಾರಕೂಡ, ಭಾಲ್ಕಿ, ಚಿಂಚೋಳಿ, ಮುಂತಾದ ಕಡೆಗಳಲ್ಲಿ ಶಿಶುವಿಹಾರ, ಪ್ರಾಥಮಿಕ, ಪ್ರೌಢ ಶಾಲಾ ಕಾಲೇಜುಗಳು ನಡೆಸುವಲ್ಲಿ ಬಡ, ಮಧ್ಯಮ ವರ್ಗದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಶ್ರಮಿಸುತ್ತಿದ್ದಾರೆ. ಮತ್ತು ಸಾಹಿತ್ಯಿಕವಾಗಿಯು ನಾಡಿನಾದ್ಯಂತ ಹಲವಾರು ಹಿರಿ-ಕಿರಿಯ ಲೇಖಕರ ಮೌಲಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಪ್ರತಿ ವರ್ಷ ಶ್ರೀ ಗುರುಲಿಂಗ ಶಿವಾಚಾರ್ಯರ ಪುಣ್ಯ ಸ್ಮರಣೆಯ ಅಂಗವಾಗಿ ಅನುಭಾವ ಪ್ರಚಾರೋಪನ್ಯಾಸ ಮಾಲೆ ಕಾರ್ಯಕ್ರಮ ನಡೆಸುವುದರೊಂದಿಗೆ ಲೇಖಕರ ಪುಸ್ತಕಗಳು ಬಿಡುಗಡೆ ಮಾಡುತ್ತಾರೆ. ಇಲ್ಲಿಯವರೆಗೆ ೮೯ ಕೃತಿಗಳು ಹೊರ ಬಂದಿರುವುದು ನೋಡಿದರೆ ಅವರ ಸಾಹಿತ್ಯದ ಪ್ರೀತಿ, ಕಾಳಜಿ ಇಲ್ಲಿ ಎದ್ದು ತೊರುತ್ತದೆ. ಅಷ್ಟೇಯಲ್ಲದೆ ನಾಡಿನಾದ್ಯಂತ ಉತ್ತಮ ಸಾಹಿತ್ಯ ರಚಿಸಿ ಖ್ಯಾತರಾದ ಹಿರಿಯ ಸಾಹಿತಿಗಳಿಗೆ ೨೦೧೧ರಿಂದ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿ ನೀಡುತ್ತಿದ್ದಾರೆ. ಇದು ಶ್ರೀ ಮಠದಿಂದ ಕೊಡುವ ರಾಜ್ಯ ಮಟ್ಟದ ಅತ್ಯುನ್ನತ ಪ್ರಶಸ್ತಿಯಾಗಿದೆ. ಇದು ಒಂದು ಲಕ್ಷ ರೂಪಾಯಿ ನಗದು, ಒಂದು ತೊಲೆ ಚಿನ್ನದ ಪದಕ ಒಳಗೊಂಡಿದೆ. ಮತ್ತು ಸಂಗೀತದಲ್ಲಿ ಸಾಧನೆ ಮಾಡಿದವರಿಗೆ ೨೦೧೮ರಿಂದ ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡುತ್ತಿದ್ದಾರೆ. ಇದು ಶ್ರೀಗಳ ಪಿತಾಮಹ ದಿ.ವೇ.ಶ್ರೀ. ಕರಬಸಯ್ಯಾ ಸ್ವಾಮಿ ಹಿರೇಮಠ ಅವರ ಸ್ಮರಣಾರ್ಥವಾಗಿ ೧೦ ಸಾವಿರ ನಗದು, ಪ್ರಶಸ್ತಿ ಫಲಕ £Ãಡಿ ಗೌರವಿಸಿದರೆ, ಚಿಂಚೋಳಿ ಶಾಖಾ ಮಠದಿಂದ ಯುವ ಲೇಖಕರಿಗೆ ‘ಚೆನ್ನ ಶ್ರೀ’ ಪ್ರಶಸ್ತಿ ನೀಡಿ ೫ಗ್ರಾಂ.ಚಿನ್ನ ಪ್ರಶಸ್ತಿ ಫಲಕದೊಂದಿಗೆ ಗೌರವಿಸುತ್ತಿದ್ದಾರೆ. ಅಷ್ಟೇಯಲ್ಲದೆ ೨೦೨೦ರಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ ಪ್ರಶಸ್ತಿ, ಮತ್ತು ಭಜನಾ ಸಂಘ ಸಂಸ್ಥೆಗಳಿಗೆ ಭಜನ ಸೇವಾ ರತ್ನ ಪ್ರಶಸ್ತಿ, ನೀಡಿ ಗೌರವಿಸಿದರೆ ಅವರ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ‘ಶ್ರೀ ಚೆನ್ನರತ್ನ’ ಪ್ರಶಸ್ತಿಯು ನೀಡುತ್ತಿದ್ದಾರೆ. ಮತ್ತು ಪ್ರತಿವರ್ಷ ಹಾರಕೂಡ ಜಾತ್ರೆಯ ಕೊನೆಯ ದಿನದಂದು ‘ಉತ್ತಮ ಜೋಡೆತ್ತು’ ಪ್ರದರ್ಶನ ಮಾಡಿದ ರೈತರಿಗೆ ಒಂದು ತೊಲೆ ಚಿನ್ನದ ಉಡುಗೊರೆಯು ನೀಡಿ ಗೌರವಿಸುತ್ತಾರೆ.
ಇವರು ಒಂದು ವಿಶ್ವವಿದ್ಯಾಲಯ ಮಾಡುವ ಕೆಲಸ ಹಾರಕೂಡ ಮಠದ ಪ್ರಕಾಶನದಿಂದ ೪೦ ಲಕ್ಷ ಖರ್ಚಿನಲ್ಲಿ ೧೫ ವಿಷಯ ವಚನ ಸಂಪುಟಗಳು ಹಿರಿಯ ಸಾಹಿತಿ ಡಾ.ಸಂಗಮೇಶ ಸವದತ್ತಿ ಮಠ ಅವರಿಂದ ಸಂಪಾದಿಸಿ ಪ್ರಕಟಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇವರ ಕಾರ್ಯ ಸಾಧನೆಗೆ ಗುಲ್ಬರ್ಗ ವಿಶ್ವವಿದ್ಯಾಲಯವು ‘ಗೌರವ ಡಾಕ್ಟರೇಟ್’ ನೀಡಿ ಗೌರವಿಸಿದರೆ ಕರ್ನಾಟಕ ಸರ್ಕಾರ ೨೦೧೯ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮತ್ತು ಅಪಾರ ಭಕ್ತ ವರ್ಗ ಹೊಂದಿದ ಇವರಿಗೆ ಗದಲೇಗಾಂವ, ಸೇಡಂ, ಬಸವಕಲ್ಯಾಣದಲ್ಲಿ ಹುಟ್ಟು ಹಬ್ಬದ ನಿಮಿತ್ತವಾಗಿ ಚಿನ್ನದ ಕಿರಿಟವು ತೊಡಿಸಿ ಗೌರವಿಸಿದ್ದಾರೆ. ಬಾಳೆಹೊನ್ನೂರಿನ ಜಗದ್ಗುರು ರಂಭಾಪುರಿ ಶ್ರೀಗಳು ‘ಶಿವಾಚಾರ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರೆ, ಉತ್ತರ ಪ್ರದೇಶದ ಕಾಶಿ ಜಗದ್ಗುರು ಪೀಠದಿಂದ ‘ಧರ್ಮ ರತ್ನ’ ನೀಡಿದ್ದಾರೆ. ಉಜ್ಜಯಿನಿ ಪೀಠದಿಂದ ‘ಸದ್ಧರ್ಮ ಶಿಖಾಮಣಿ’ ಪ್ರಶಸ್ತಿ, ಕಮಲಾಪೂರದಿಂದ ‘ಮನುಕುಲ ರತ್ನ’ ಪ್ರಶಸ್ತಿ, ಕಲಬುರಗಿಯಿಂದ ‘ದಾಸೋಹ ಜ್ನಾನ ರತ್ನ’ ಪ್ರಶಸ್ತಿ, ಹುಲಸೂರಿನಿಂದ ‘ಕಲ್ಯಾಣ ಕರ್ನಾಟಕ ರತ್ನ’ ಪ್ರಶಸ್ತಿ, ಎನ್.ಆರ್.ಜಿ.ಪೌಂಡೆಷನ್ ವತಿಯಿಂದ ‘ಕಲ್ಯಾಣ ಕರ್ನಾಟಕ ಅಧ್ಯಾತ್ಮ ಸಿರಿ’ ಪ್ರಶಸ್ತಿ, ಮುಂಡರಗಿಯಿAದ ‘ಜಗದ್ಗುರು ಅನ್ನದಾನೇಶ್ವರ ಪ್ರತಿಷ್ಠಾನದ ಪ್ರಶಸ್ತಿ’ ಕಲಬುರ್ಗಿಯ ಸ್ವರ ಮಾಧುರಿ ಸಂಗೀತ ವಿದ್ಯಾಲಯದಿಂದ ‘ಸ್ವರ ಮಾಧುರಿ ಪ್ರಶಸ್ತಿ’ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಪಡೆದು ಖ್ಯಾತರಾಗಿದ್ದಾರೆ. ೨೦೦೩ರಲ್ಲಿ ಇವರ ದಿವ್ಯ ಸಾನಿಧ್ಯದೊಂದಿಗೆ ಹಾರಕೂಡ ಸಂಸ್ಥಾನ ಮಠದ ಆವರಣದಲ್ಲಿ ೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಅದ್ದೂರಿಯಾಗಿ ನಡೆದು ಬಂದಿದೆ.
ಇವರ ಕುರಿತು ಮುಸ್ಲಿಂ ಸಾಹಿತಿಗಳಾದ ಹುಸೇನ್ ಸಾಬ ಮಾಸ್ತರ್, ಕೊಹಿನೂರಿನ ಮಲಂಗ ಶಾ ಬಾಬಾ, ರಸೂಲ್ ಸಾಬ್ ಬಾಬಾ ,ಲಾಲ ಮಹಮ್ಮದ್ ಶಾ, ನಬಿಲಾಲ, ಎಲ್.ಬಿ.ಕೆ.ಅಲ್ದಾಳ, ಮುಂತಾದವರು ಭಕ್ತಿಯಿಂದ ಸಾಹಿತ್ಯ ರಚಿಸಿದ್ದರೆ. ಮಚ್ಚೇಂದ್ರ ಪಿ.ಅಣಕಲ್ ಅವರು ‘ಹರ ಹರಾ ಹಾರಕೂಡೆಶ್ವೇರ’ ಎಂಬ ಅಂಕಿತನಾಮದಿAದ ನೂರಾರು ಅಧುನಿಕ ವಚನಗಳು ಬರೆದರೆ ಡಾ.ಶಿವಶರಣಯ್ಯಾ ಎಂ.ಮಠಪತಿಯವರು ‘ಹಾರಕೂಡದೀಶ ಶ್ರೀ ಚನ್ನವೀರ ಪ್ರಿಯ ಚನ್ನಬಸವೇಶ್ವರ’ ಎಂಬ ಅಂಕಿತನಾಮದಿAದ ಹಲವಾರು ವಚನಗಳು ಬರೆದು ಪುಸ್ತಕ ಪ್ರಕಟಿಸಿದ್ದಾರೆ. ಇವರ ೫೭ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಪತ್ರಕರ್ತ, ಸಾಹಿತಿ ಮಾಣಿಕ ಆರ್.ಭುರೆಯವರು ‘ನುಡಿಚೆನ್ನ’ ಎಂಬ ಅಭಿನಂದನಾ ಗ್ರಂಥವನ್ನು ಸಂಪಾದಿಸಿ ಪ್ರಕಟಿಸಿದ್ದಾರೆ. ಮುಸ್ಲಿಂರು ದಲಿತರಿಗೆ ಈ ಮಠದಲ್ಲಿ ಸರ್ವಧರ್ಮ ಸಮಾನತೆ ಸಾರಲು ಪೂಜ್ಯ. ಡಾ. ಚನ್ನವೀರ ಶಿವಾಚಾರ್ಯರು ಕಾರಣಿಭೂತರಾಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ