ಮಂಗಳವಾರ, ಜನವರಿ 14, 2025
ಡಾ. ಸುನೀತಾ ಕೂಡ್ಲಿಕರ್
ಉದಯೋನ್ಮುಖ ಕವಯತ್ರಿ ಡಾ.ಸುನೀತಾ ಕೂಡ್ಲಿಕರ್ ರವರು ಬೀದರದ ಬಾಬುರಾವ ಮತ್ತು ಶಾಂತಾಬಾಯಿ ದಂಪತಿಗಳಿಗೆ ದಿನಾಂಕ ೬-೬-೧೯೭೮ರಲ್ಲಿ ಜನಿಸಿದ್ದಾರೆ. ಎಂ.ಎ. ಎಂ.ಫೀಲ್. ಪಿ.ಎಚ್.ಡಿ. ಪದವಿಧರರಾಗಿದ್ದು, `ಬೋಮ್ಮಗೊಂಡೆಶ್ವರ ಒಂದು ಅಧ್ಯಯನ' ಎಂಬುದು ಎಂ.ಫೀಲ್ ಪ್ರಬಂಧವಾದರೆ, `ತಾಯ್ತನದ ವಿಭಿನ್ನ ಗ್ರಹಿಕೆಗಳು' ಪಿ.ಎಚ್.ಡಿ. ಮಹಾಪ್ರಬಂಧವಾಗಿದೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾಗಿ ಕವನ, ಲೇಖನ, ಪ್ರಬಂಧ, ಹನಿಗವನಗಳು ಬರೆಯುತ್ತಿದ್ದಾರೆ. ಇವರ ಬರಹಗಳು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ವಿಚಾರ ಸಂಕಿರಣಗಳಲ್ಲಿ ಅನೇಕ ಪ್ರಬಂಧಗಳು ಮಂಡನೆ ಮಾಡಿದ್ದಾರೆ. ಇವರಿಗೆ ಮಾತೃಶ್ರೀ ಪ್ರಶಸ್ತಿ, ಅಣ್ಣಾ ಹಜಾರೆ ರಾಷ್ಟ್ರೀಯ ಪ್ರಶಸ್ತಿ, ೨೦೧೮ರಲ್ಲಿ ಆರ್ ವಿ.ಬಿಡಪ್ ಶಿಷ್ಯ ವೇತನ ಪ್ರಶಸ್ತಿ, ಸೇರಿದಂತೆ ಮೊದಲಾದವು ಪಡೆದಿದ್ದಾರೆ. ಇವರು ಬೀದರ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ತು ಮತ್ತು ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ