ಮಂಗಳವಾರ, ಜನವರಿ 14, 2025
ಚಂದ್ರಕಾಂತ ಎಸ್. ಬಿರಾದಾರ.
ಹವ್ಯಾಸಿ ಬರಹಗಾರರಾದ ಚಂದ್ರಕಾAತ ಎಸ್.ಬಿರಾದಾರ ರವರು ಭಾಲ್ಕಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಶರಣಪ್ಪಾ ಬಿರಾದಾರ ಮತ್ತು ಪ್ರಯಾಗಬಾಯಿ ದಂಪತಿಗಳಿಗೆ ದಿನಾಂಕ ೧೫-೭-೧೯೬೫ರಲ್ಲಿ ಜನಿಸಿದ್ದಾರೆ. ಎಂ.ಎ.ಕನ್ನಡ ಮತ್ತು ಎಂ.ಎ.ಪತ್ರಿಕೊದ್ಯಮದಲ್ಲಿ ಸ್ನಾತಕೊತ್ತರ ಪದವಿಧರರಾದ ಇವರು ಭಾಲ್ಕಿಯ ಶಿವಾಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ೧೯೯೩ರಿಂದ ಪತ್ರಕರ್ತರಾಗಿ ಸೇವೆ ಪ್ರಾರಂಭಿಸಿ ಬೀದರದ ಉತ್ತರ ಕರ್ನಾಟಕ, ವಿಜಯ ಕರ್ನಾಟಕ, ವಿಜಯವಾಣಿ, ಮೊದಲಾದ ಪತ್ರಿಕೆಗಳಲ್ಲಿ ೧೨ ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ ಇವರು `ಕಾರ್ಯ ಪ್ರೇಮಿ’ ಎಂಬ ವಾರ ಪತ್ರಿಕೆಯ ಸಂಪಾದಕರಾಗಿ, ೧೫ವರ್ಷ ಕರ್ನಾಟಕ ಪತ್ರಕರ್ತರ ಸಂಘದ ಭಾಲ್ಕಿ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯದಲ್ಲಿಯು ತುಂಬ ಆಸಕ್ತರಾಗಿ ಕವನ, ಲೇಖನ, ಬರಹಗಳು ಬರೆದಿದ್ದು, ಅವು ಹಲವಾರು ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ೨೦೨೦ರಲ್ಲಿ ಬೆಂಗಳೂರಿನ ಸಂಸ್ಥೆಯೊAದರಿAದ `ಹೆಮ್ಮಯ ಕನ್ನಡಿಗ’ ಎಂಬ ಪ್ರಶಸ್ತಿ ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ