ಪುಟಗಳು

ಮಂಗಳವಾರ, ಜನವರಿ 14, 2025

ಡಾ. ರಾಜಶೇಖರ ಹೂಗಾರ

ಉದಯೋನ್ಮುಖ ಬರಹಗಾರ ಡಾ.ರಾಜಶೇಖರ ಹೂಗಾರ ರವರು ಹುಮನಾಬಾದ ತಾಲೂಕಿನ ಜಲಸಂಗಿ ಗ್ರಾಮದ ಶಿವರಾಜ ಮತ್ತು ಮಹಾದೇವಿ ದಂಪತಿಗಳಿಗೆ ದಿನಾಂಕ ೧-೬-೧೯೮೮ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ ಪದವಿಧರರಾದ ಇವರು ಹುಮನಾಬಾದಿನ ವೀರಭದ್ರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಅಥಿತಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾದ ಇವರು ಕವನ, ಲೇಖನ, ಚುಟುಕು, ಹನಿಗವನ, ಪ್ರಬಂಧಗಳನ್ನು ಬರೆದಿದ್ದು, ಅವು ಕೆಲ ಪತ್ರಿಕೆಗಳಲ್ಲಿಯೂ ಪ್ರಕಟವಾಗಿವೆ. ಮತ್ತು `ಶ್ರೀ ರಂಜಾನ್ ದರ್ಗಾ ರವರ ಸಾಹಿತ್ಯ ಒಂದು ಅವಲೋಕನ' ಎಂಬುದು ಇವರ ಪಿ.ಎಚ್.ಡಿ.ಮಹಾಪ್ರಬಂಧವಾಗಿದೆ. ಮತ್ತು `ರಂಜಾನ್ ದರ್ಗಾ ರವರ ಕಾವ್ಯಾವಲೋಕನ' ಎಂಬ ಒಂದು ವಿಮರ್ಶಾ ಕೃತಿಯು ಬರೆದಿದ್ದಾರೆ. ಹೀಗೆ ಇವರು ತಮ್ಮ ಸಾಹಿತ್ಯ ರಚನೆಯೊಂದಿಗೆ ಹುಮನಾಬಾದ ತಾಲೂಕಿನ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಬೇಲೂರಿನ ಉರಿಲಿಂಗ ಪೆದ್ದಿ ಮಠ, ಹಾಗೂ ಸಸ್ತಾಪೂರದ ಯಲ್ಲಾಲಿಂಗೇಶ್ವರ ಮಠದಿಂದ, ಮತ್ತು ಕಸಾಪ, ದಸಾಪದ ವತಿಯಿಂದ ಅನೇಕ ಪ್ರಶಸ್ತಿ ಪುರಸ್ಕಾರಗಳು ನೀಡಿ ಗೌರವಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ