ಭಾನುವಾರ, ಜನವರಿ 12, 2025
ಸಿದ್ದಮ್ಮ ಸಂಗ್ರಾಮ ಬಸವಣ್ಣನೋರ್
ಕವಯತ್ರಿ ಸಿದ್ದಮ್ಮ ಸಂಗ್ರಾಮ ಬಸವಣ್ಞನೋರ್. ಇವರು ಚಿಂಚೋಳಿ ತಾಲೂನ ಚಂದಾಪೂರ ಗ್ರಾಮದ ಶರಣಪ್ಪ ಮತ್ತು ಶಾಂತಮ್ಮ ದಂಪತಿಗಳಿಗೆ ದಿನಾಂಕ ೨೭-೧೧-೧೯೮೬ರಲ್ಲಿ ಜನಿಸಿದ್ದಾರೆ. ಬಿ.ಎ.ಬಿ.ಎಡ್ ಪದವಿಧರರಾಗಿರುವ ಇವರು ಬೀದರ ಚಿಟ್ಟಾ ವಾಡಿಯ ಸಂಗ್ರಾಮ ರವರ ಧರ್ಮಪತ್ನಿಯಾಗಿದ್ದು. ಖಾಸಗಿ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ತುಂಬ ಆಸಕ್ತರಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದಾರೆ. ಮತ್ತು `ಆಶಾ ದೀವಿಗೆ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಇವರ ಬರಹಗಳು ನಾಡಿನ ವಿವಿಧ ದಿನಪತ್ರಿಕೆಗಳಲ್ಲಿ ಹಾಗೂ ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ