ಮಂಗಳವಾರ, ಜನವರಿ 14, 2025
ಕಲ್ಯಾಣರಾವ ಮದರಗಾಂವಕರ್
ಯುವ ಬರಹಗಾರ ಪತ್ರಕರ್ತ ಕಲ್ಯಾಣಿ ಮದರಗಾಂವಕರ್ ರವರು ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮದ ರಾಮಣ್ಣ ಮತ್ತು ಬಸ್ಸಮ್ಮಾ ದಂಪತಿಗಳಿಗೆ ದಿನಾಂಕ ೧-೬-೧೯೭೬ರಲ್ಲಿ ಜನಿಸಿದ್ದಾರೆ. ಬಿ.ಎಸ್ಸಿ ಪದವಿಧರರಾದ ಇವರು ಸುಮಾರು ಇಪ್ಪತ್ತು ವರ್ಷಗಳಿಂದ ಕಾರಂಜಾ ಎಕ್ಷಪ್ರೇಸ್, ಕನ್ನಡಪ್ರಭ, ವಿಶ್ವವಾಣಿ, ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಸದ್ಯ ಉದಯಕಾಲ ಪತ್ರಿಕೆಯ ವರದಿಗಾರರಾಗಿದ್ದಾರೆ ಇವರ ಬರಹಗಳು ನಾಡಿನ ವಿವಿಧ ಪತ್ರಿಕೆ ಮತ್ತು ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ೨೦೧೨ರಲ್ಲಿ ರಾಜ್ಯ ಮಟ್ಟದ ಕಲಾಂಜಲಿ ಸಾಹಿತ್ಯ ಪ್ರಶಸ್ತಿ, ಕನ್ನಡ ಕಾವ್ಯ ರತ್ನ ಪ್ರಶಸ್ತಿ, ದೇಶಪಾಂಡೆ ಪ್ರತಿಷ್ಠಾನದ ಸಮಾಜರತ್ನ ಪ್ರಶಸ್ತಿ, ಪುರಸ್ಕಾರಗಳು ಪಡೆದಿದ್ದಾರೆ. ಸದ್ಯ ಇವರು ರಾಜ್ಯ ಮಟ್ಟದ ಪತ್ರಿಕೆಗಳ ವಿವಿಧ ವರದಿಗಾರರ ಸಂಘದ ಬಸವಕಲ್ಯಾಣ ತಾಲೂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ