ಮಂಗಳವಾರ, ಜನವರಿ 14, 2025
ಡಾ.ಭೀಮಾಶಂಕರ ಬಿರಾದಾರ
ಹವ್ಯಾಸಿ ಬರಹಗಾರ ಡಾ. ಭೀಮಾಶಂಕರ ಬಿರಾದಾರ ರವರು ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದ ಧೂಳಪ್ಪಾ ಮತ್ತು ಸರಸ್ವತಿ ದಂಪತಿಗಳಿಗೆ ದಿನಾಂಕ ೧-೨-೧೯೭೯ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ ಪದವಿಧರರಾದ ಇವರು ಬಸವಕಲ್ಯಾಣದ ಖಾಸಗಿ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. `ಸಾಮಾಜಿಕ ಕನ್ನಡ ಸಾಹಿತ್ಯ ವಿಮರ್ಶೆಯ ಗ್ರಹಿಕೆ' ಎಂಬುದು ಇವರ ಪಿ.ಎಚ್.ಡಿ.ಮಹಾಪ್ರಬಂಧವಾಗಿದೆ. ವಿದ್ಯಾರ್ಥಿದೆಸೆಯಿಂದಲೇ ಸಾಹಿತ್ಯದಲ್ಲಿ ಆಸಕ್ತರಾಗಿ ಕತೆ, ಕವನ, ಲೇಖನ, ಹನಿಗವನ, ಪ್ರಬಂಧ, ಸಂಶೋಧನೆ, ವಿಮರ್ಶೆ, ಮೊದಲಾದವು ಬರೆದಿದ್ದಾರೆ. ಮತ್ತು ಮಯೂರ, ವಿಜಯ ಕರ್ನಾಟಕ, ವಿಜಯವಾಣಿ, ಸಂಗತ, ನ್ಯಾಯಪಥ, ಅರಹು-ಕುರುಹು, ಏನ್ ಸುದ್ಧ, ಬುಕ್ ಬ್ರಹ್ಮ ಮೊದಲಾದ ಅಂತರಜಾಲ ಪತ್ರಿಕೆಗಳಲ್ಲಿ ಹಾಗೂ ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಅವು ಪ್ರಕಟವಾಗಿವೆ. ಅಷ್ಟೇಯಲ್ಲದೆ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ, ವಿಚಾರ ಸಂಕಿರಣ ಮತ್ತು ಕಮ್ಮಟಗಳಲ್ಲಿ ಭಾಗವಹಿಸಿರುವ ಇವರು ಅನೇಕ ಕನ್ನಡಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉಪನ್ಯಾಸಗಳನ್ನು ನೀಡಿದ್ದಾರೆ. ಬಸವಕಲ್ಯಾಣದ ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ನಿರ್ದೇಶಕರಾಗಿ, ಬಸವಕಲ್ಯಾಣ ಕಸಾಪದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ