ಪುಟಗಳು

ಮಂಗಳವಾರ, ಜನವರಿ 14, 2025

ಓಂಕಾರ ಪಾಟೀಲ್

ಹವ್ಯಾಸಿ ಬರಹಗಾರರಾದ ಓಂಕಾರ ಪಾಟೀಲ್ ರವರು ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಬಸವರಾಜ ಮತ್ತು ಪ್ರಭಾವತಿ ದಂಪತಿಗಳಿಗೆ ದಿನಾಂಕ ೨೫-೧೧-೧೯೭೮ರಲ್ಲಿ ಜನಿಸಿದ್ದಾರೆ. ಬಿ.ಎ. ಪದವೀಧರರಾದ ಇವರು ಸ್ವಯಂ ವೃತ್ತಿಯೊಂದಿಗೆ ಸಾಹಿತ್ಯ ರಚನೆಯಲ್ಲಿ ಆಸಕ್ತರಾಗಿ ಕವನ , ಲೇಖನ, ಹನಿಗವನ, ಮೊದಲಾದವು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಕಲೆ, ಸಾಹಿತ್ಯದೊಂದಿಗೆ ಸಾಮಾಜಿಕ, ರಾಜಕೀಯವಾಗಿ ಗುರ್ತಿಸಿಕೊಂಡಿರುವ ಇವರು ಬೀದರ ಕರ್ನಾಟಕ ಸಾಹಿತ್ಯ ಅಕಾಡೆಮಿ, ಮತ್ತು ಚಕೋರ ಕವಿ ಕಾವ್ಯ ವೇದಿಕೆಯ ಪ್ರತಿನಿಧಿಯಾಗಿ. ಸೇವೆ ಸಲ್ಲಿಸಿದ ಇವರು ಸದ್ಯ ಬೀದರ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದಾರೆ. ಇವರಿಗೆ ಕಸಾಪದ ವತಿಯಿಂದ ಬೆಳ್ಳಿ ಗೌರವ ಸನ್ಮಾನ ಮತ್ತು ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ ಸಾಹಿತ್ಯ ರತ್ನ ಪ್ರಶಸ್ತಿ, ಹಾಗೂ ಕಾಸರಗೋಡು ಸಾಹಿತ್ಯ ವೇದಿಕೆಯಿಂದ ಕಾವ್ಯ ಶಿಖಾಮಣಿ, ನೈಜದೀಪ ಸಾಹಿತ್ಯ ವೇದಿಕೆಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಗಳು ಲಭೀಸಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ