ಮಂಗಳವಾರ, ಜನವರಿ 14, 2025
ಕೆ.ಎಸ್.ರಾಮಬಾಣ
ಸಾಹಿತಿ ಕೆ.ಎಸ್.ರಾಮಬಾಣ ರವರ ಪೂರ್ಣನಾಮ ಕಾಶಪ್ಪ ತಂದೆ ಶರಣಪ್ಪಾ ರಾಮಬಾಣ ಎಂದಾಗಿದೆ. ಇವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹೀರೆನಾಗಾಂವ ಗ್ರಾಮದ ಶ್ರೀ ಶರಣಪ್ಪ ಮತ್ತು ಪಾರ್ವತಿ ದಂಪತಿಗಳಿಗೆ ದಿನಾಂಕ ೨೬-೬-೧೯೫೫ರಲ್ಲಿ ಜನಿಸಿದ್ದಾರೆ. ಎಂ.ಎ. ಪದವಿಧರರಾದ ಇವರು ೧೯೮೫ರಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ, ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಲಯದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ೨೦೧೫ರಲ್ಲಿ ನಿವೃತ್ತರಾಗಿದ್ದಾರೆ. ವಿದ್ಯಾರ್ಥಿಯಾಗಿದಾಗಲೇ ಸಾಹಿತ್ಯದ ಆಸಕ್ತಿಯನ್ನು ಬೆಳೆಸಿಕೊಂಡು ೨೦೦೪ರಲ್ಲಿ ಹತ್ತು ಜನ ಲೇಖಕರ ಜತೆಗೂಡಿ `ನೂರು ಭಾವಗಳು ಹತ್ತು ಮುಖಗಳು' ಎಂಬ ಪ್ರಾತಿನಿಧಿಕ ಸಂಕಲನದಲ್ಲಿ ೧೦ ಕವನಗಳು ಪ್ರಕಟಿಸಿದ್ದಾರೆ. `ಒಂದಾಗಿ ಬಾಳೋಣ' (ನಾಟಕ) `ಮೊಸರು ಮಾರುವವನು' (ಕತೆ) ಬರೆದಿದ್ದು, ಅವು ಅಪ್ರಕಟಿತವಾಗಿವೆ. ಇವರಿಗೆ ಭಾಲ್ಕಿ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿಯು ನೀಡಿ ಗೌರವಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ