ಭಾನುವಾರ, ಜನವರಿ 12, 2025
ಎಸ್.ಎಂ ಜನವಾಡಕರ್
ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್. ಇವರು ಬೀದರ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಮರಿಲಿಂಗಪ್ಪಾ ಮತ್ತು ಮಹಾರುದ್ರಮ್ಮ ದಂಪತಿಗಳಿಗೆ ದಿನಾಂಕ ೩-೧-೧೯೫೦ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಇಡಿ ಪದವಿಧರರಾದ ಇವರು ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಾಗಿ, ಡಯಟ್ನ ಪ್ರಶಿಕ್ಷಕ, ಉಪನ್ಯಾಸಕರಾಗಿ, ಸಹಾಯಕ ಶಿಕ್ಷಣಾಧಿಕಾರಿಯಾಗಿ, ಉಪನಿರ್ದೇಶಕರ ಕಾರ್ಯಾಲಯದಲ್ಲಿ ಕನ್ನಡ ವಿಷಯ ಪರಿವಿಕ್ಷಕರಾಗಿ, ಜಿಲ್ಲಾ ಯೋಜನಾ ಸಹಾಯಕ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿ ೨೦೦೮ರಲ್ಲಿ ನಿವೃತ್ತರಾಗಿದ್ದಾರೆ. ತಮ್ಮ ವೃತ್ತಿ ಬದಕಿನೊಂದಿಗೆ ಸಾಹಿತ್ಯದ ಗೀಳು ಬೆಳೆಸಿಕೊಂಡ ಇವರು `ಹಸಿರು ಕ್ರಾಂತಿ' ಮತ್ತು `ಬುದ್ಧ ಗೆದ್ದ ಮಾರನ ಯುದ್ಧ’ (ನಾಟಕಗಳು) ಶೀಲ ತರಂಗ, ಪ್ರಜ್ಞಾ ತರಂಗ, ಕರುಣಾ ತರಂಗ (ಕವನಸಂಕಲನಗಳು) ಬಣ್ಣದ ಬದುಕು (ಕಥಾ ಸಂಕಲನ) ನಂಟು ಬಿಡದೆ ಅಂಟಿಕೊAಡವರು, ಮಾಸಿದ ಹಾಸಿಗೆ ಕಾದ ಕಂಬನಿ (ಕಾದಂಬರಿಗಳು) ಧಮ್ಮಾವೃತ ಗೀತೆ, ತಥಾಗತ್ ಗಾಥೆಗಳ್' (ಬುದ್ದ, ಧಮ್ಮ ಚರಿತ ಕಾವ್ಯಗಳು) ಗಾಜಿನ ಬಳೆ ಚೂರು, ಕರುಳಿನ ಕತ್ತರಿ, ಕವಲು ದಾರಿಯ ಪಯಣ. (ವೈಚಾರಿಕ ಕೃತಿಗಳು) ಹಿಮ ಸಾಗರ (ಪ್ರವಾಸಕಥನ) ಕಲ್ಯಾಣ ಕಂಡ ಕಲ್ಯಾಣ (ಆಧುನಿಕ ವಚನ ಸಂಕಲನ) ಬೀದರ ಜನಪದ ಸಿರಿ (ಜಾನಪದ) ಬೆಡಗಿನ ಬೀದರ (ಐತಿಹಾಸಿಕ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹ ಲೇಖನ ಚಿಂತನಗಳು ಕಲಬುರಗಿ ಆಕಾಶವಾಣಿ, ದೂರದರ್ಶನಗಳಲ್ಲಿಯೂ ಪ್ರಸಾರವಾಗಿವೆ. ಇವರಿಗೆ ಇಂದೊರದ ಡಾ.ಅಂಬೇಡ್ಕರ್ ಪ್ರಶಸ್ತಿ, ದೆಹಲಿಯಿಂದ ಭಗವಾನ್ ಬುದ್ದ ರಾಷ್ಟ್ರೀಯ ಫೇಲೊಸಿಪ್, ಧಾರವಾಡದಿಂದ ರಾಷ್ಟ್ರೀಯ ಮಹಾಮಾತಾ ಪ್ರಶಸ್ತಿ, ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ, ಬೆಲೂರಿನ ಉರಿಲಿಂಗ ಪೆದ್ದಿ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಇವರು ಮುಂಬೈನ ಬೌದ್ದ ಮಹಾಸಭಾ ಸದಸ್ಯರಾಗಿ, ಬೀದರ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಬೌದ್ಧ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾಗಿ, ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ