ಶನಿವಾರ, ಜನವರಿ 11, 2025
ಅನಿಲ್ ಕುಮಾರ ಸೂರ್ಯವಂಶಿ
ವಾಲಿಬಾಲ್ ಕ್ರೀಡಾ ಪಟುವಾಗಿದ್ದುಕೊಂಡು ಕನ್ನಡ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಉದಯೋನ್ಮುಖ ಯುವ ಕವಿಯೆಂದರೆ ಅನೀಲ್ ಕುಮಾರ ಸೂರ್ಯವಂಶಿ. ಇವರು ಬೀದರ ಜಿಲ್ಲೆ ಔರಾದ ತಾಲೂಕಿನ 'ಮಸ್ಕಲ್' ಗ್ರಾಮದ ನರಸಿಂಗರಾವ ಮತ್ತು ಶಕುಂತಲಾ ದಂಪತಿಗಳಿಗೆ ದಿನಾಂಕ ೧-೭-೧೯೯೯ರಲ್ಲಿ ಜನಿಸಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮುಧೋಳ್ ನಲ್ಲಿ ಮುಗಿಸಿ ನಂತರ ಬೆಂಗಳೂರ್ ನ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಯಪ್ರಕಾಶ್ ನಾರಾಯಣ್ ಕ್ರೀಡಾ ವಸತಿ ಕೇಂದ್ರದಲ್ಲಿ ಪ್ರೌಢ ಮತ್ತು ಪಿ.ಯು.ಶಿಕ್ಷಣ ಪಡೆದು ಸದ್ಯ ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ವಾಲಿಬಾಲ್ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಹಿತ್ಯದಲ್ಲಿ ಆಸಕ್ತರಾಗಿ 'ಸೂಜಿ ಮಲ್ಲಿಗೆ' ಮತ್ತು `ಅಪ್ಪನ ಹೆಗಲು ' ಎಂಬ ಎರಡು ಕೃತಿಗಳು ೨೦೧೫ರಲ್ಲಿ ಪ್ರಕಟಿಸಿದ್ದ ಇವರು 'ಕರ್ನಾಟಕ ರಾಜ್ಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಿ, ಗುಜರಾತ್ನಲ್ಲಿ ನಡೆದ ರಾಷ್ಟ್ರಮಟ್ಟದ ಪಂದ್ಯವಳಿಯಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕಾವ್ಯ ರಚಿಸುವ ಆಸಕ್ತಿಯಿರುವುದರಿಂದ ಆಗಾಗ ಸಾಹಿತ್ಯ ರಚನೆಯು ಮಾಡುತ್ತಾರೆ. ಬೀದರನಲ್ಲಿ ನಡೆದ ವಚನ ಸಾಹಿತ್ಯ ಸಮ್ಮೇಳನ, ಹಾಗೂ ಬೆಂಗಳೂರ್ ಉತ್ತರದ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಕವನ ವಾಚನ ಮಾಡಿದ್ದಾರೆ. ಇವರ ಬರಹಗಳು ನಾಡಿನ ಕೆಲ ಪತ್ರಿಕೆಗಳಲ್ಲಿಯೂ ಪ್ರಕಟವಾಗಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ