ಪುಟಗಳು

ಮಂಗಳವಾರ, ಜನವರಿ 14, 2025

ಅಶೋಕ ಸಿಂಧೆ

ಚಿತ್ರ ಕಲಾವಿದರು ಹಾಗೂ ಹವ್ಯಾಸಿ ಬರಹಗಾರರಾದ ಅಶೋಕ ಸಿಂಧೆಯವರು. ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮದ ಲಕ್ಷ್ಮಣ ಮತ್ತು ರತ್ನಮ್ಮ ದಂಪತಿಗಳಿಗೆ ದಿನಾಂಕ ೩-೭-೧೯೭೦ರಲ್ಲಿ ಜನಿಸಿದ್ದಾರೆ. ಚಿತ್ರಕಲೆಯಲ್ಲಿ ಡಿ.ಎಂ.ಸಿ. ಮತ್ತು ಎ.ಎಂ.ಸಿ. ಶಿಕ್ಷಣ ಪಡೆದು ಭಾಲ್ಕಿ ತಾಲೂಕಿನ ಬಾಳೂರಿನ ಸರ್ಕಾರಿ ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಕಲೆ, ಸಾಹಿತ್ಯದಲ್ಲಿ ಆಸಕ್ತರಾಗಿ ಕವನ, ಲೇಖನ, ಹನಿಗವನ ಮೊದಲಾದವು ಬರೆದಿದ್ದಾರೆ. ಮತ್ತು ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು ಕಸಾಪದ ವಿವಿಧ ಸಮ್ಮೇಳನಗಳ ಕವಿಗೋಷ್ಠಿಯಲ್ಲಿ ಕವನ ವಾಚನ ಮತ್ತು ಉಪನ್ಯಾಸವು ನೀಡಿದ್ದಾರೆ. ಇವರಿಗೆ ೨೦೧೧ರಲ್ಲಿ ಭಾಲ್ಕಿ ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿ, ೨೦೧೩ರಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ೨೦೧೪ರಲ್ಲಿ ರಾಜ್ಯ ಕಲಾ ರತ್ನ ಮಾರ್ಗದರ್ಶನ ಪ್ರಶಸ್ತಿ, ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿಯು ನೀಡಿ ಗೌರವಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ