ಪುಟಗಳು

ಮಂಗಳವಾರ, ಜನವರಿ 14, 2025

ಸಂಜೀವಕುಮಾರ ವೈ. ಕಂಟೆ

ಯುವ ಬರಹಗಾರ ಸಂಜೀವಕುಮಾರ ವೈ.ಕಂಟೆ. ರವರು ಭಾಲ್ಕಿ ತಾಲೂಕಿನ ಖಟಕಚಿಂಚೋಳಿ ಗ್ರಾಮದ ವೈಜಿನಾಥ ಮತ್ತು ರತ್ನಮ್ಮ ದಂಪತಿಗಳಿಗೆ ದಿನಾಂಕ ೪-೪-೧೯೮೪ರಲ್ಲಿ ಜನಿಸಿದ್ದಾರೆ. ಬಿ.ಎ.ಪದವಿಧರರಾದ ಇವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ವಯಂ ವೃತ್ತಿಯಲ್ಲಿ ತೊಡಗಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ತೊಡಗಿದ ಇವರು ಸುಮಾರು ಐವತ್ತಕ್ಕೂ ಹೆಚ್ಚು ಕವನಗಳನ್ನು ಬರೆದಿದ್ದು, ಅವು ಕೆಲ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಮತ್ತು ಹಲವಾರು ಕವಿಗೋಷ್ಠಿಗಳಲ್ಲಿಯು ಕವನ ವಾಚನ ಮಾಡಿದ ಇವರು ಇತ್ತೀಚೆಗೆ ಕನ್ನಡ ಚಲನ ಚಿತ್ರವೊಂದರಲ್ಲಿ ಕೂಡ ನಟಿಸಿದ್ದಾರೆ. ಇವರು ಬರೆದ ಚೊಚ್ಚಲ ಕೃತಿ `ನನ್ನ ಮುತ್ತುಗಳು' ಕವನಸಂಕಲನ ಪ್ರಕಟಣೆಯ ಹಂತದಲ್ಲಿದೆ. ೨೦೦೪ರಲ್ಲಿ ಅಂದಿನ ತಾಲೂಕಾ ಕಸಾಪ ಅಧ್ಯಕ್ಷರು ಇವರನ್ನು ಖಟಕಚಿಂಚೋಳಿ ಹೊಬಳಿ ಕಸಾಪ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರಿಂದ ನಿರುದ್ಯೋಗಿಯಾಗಿದ್ದ ಇವರು ಕಸಾಪ ಕಾರ್ಯಕ್ರಮ ಉದ್ಘಾಟನಾ ಸಮಾರಂಭಕ್ಕೆ ಹಣಕಾಸಿನ ತೊಂದರೆ ಎದುರಾದಾಗ ಬೆರಳಿಗೆ ಅಪ್ಪ ತೊಡಿಸಿದ ಅರ್ಧತೊಲೆ ಚಿನ್ನದುಂಗುರ ಮಾರಿ ಕಾರ್ಯಕ್ರಮ ಮಾಡಿ ಕನ್ನಡಾಭಿಮಾನ ಮೆರದಿದ್ದಾರೆ. ಇವರ ಅವಧಿಯಲ್ಲಿ `ಶಾಲೆಗೊಂದು ಕನ್ನಡ ಕಾರ್ಯಕ್ರಮ' ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮವು ಮಾಡಿದ್ದರಿಂದ ಇವರಗೆ ಕೆಲ ಕನ್ನಡಪರ ಸಂಘ-ಸAಸ್ಥೆಯವರು ಹಲವಾರು ಪ್ರಶಸ್ತಿ ಪುರಸ್ಕಾರಗಳು ನೀಡಿ ಗೌರವಿಸಿದ್ದಾರೆ.ಮತ್ತು ಕ್ರಾಂತಿ ಗಣೇಶ ಯುವಕ ಸಂಘವು ಅತ್ಯುತ್ತಮ ಸೇವಾ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ