ಭಾನುವಾರ, ಜನವರಿ 12, 2025
ವೀರಶೇಟ್ಟಿ ಸಂಗ್ರಾಮ್
`ವಿ.ಎಸ್.ಕೆ.' ಎಂಬ ಕಾವ್ಯನಾಮದಿಂದ ಸಾಹಿತ್ಯ ರಚಿಸುತ್ತಿರುವ ಸಾಹಿತಿ ವೀರಶೇಟ್ಟಿ ಸಂಗ್ರಾಮ್. ಇವರು ಬೀದರ ತಾಲೂಕಿನ ಮಂದಕನಳ್ಳಿ ಗ್ರಾಮದ ಸಂಗ್ರಾಮ ಮತ್ತು ಕಸ್ತೂರಿಬಾಯಿ ದಂಪತಿಗಳಿಗೆ ದಿನಾಂಕ ೩-೫-೧೯೮೯ರಲ್ಲಿ ಜನಿಸಿದ್ದಾರೆ. ಬಿ.ಕಾಂ,ಎA.ಬಿ.ಎ ಪದವಿಧರರಾದ ಇವರು ಬೆಂಗಳೂರಿನ ಎಚ್.ಡಿ.ಎಫ್.ಸಿ. ಬ್ಯಾಂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ೨೦೧೮ರಲ್ಲಿ `ಮೊದಲ ಹೆಜ್ಜೆ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಈ ಕೃತಿಗೆ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧನಸಹಾಯವು ಲಭಿಸಿದೆ. ಇವರು ಕತೆ, ಕವನ, ಲೇಖನಗಳನ್ನು ಬರೆಯುವುದರೊಂದಿಗೆ ೨೦೧೭ರಲ್ಲಿ ಸಂಗ್ರಾಮ ಎಜುಕೇಶನಲ್ ಟ್ರಸ್ಟ್ (ರಿ) ಒಂದನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ