ಪುಟಗಳು

ಸೋಮವಾರ, ಜನವರಿ 20, 2025

ಬಿ.ಬಿ.ಪೂಜಾರಿ

`ಕನ್ನಡದ ಪೂಜಾರಿ' ಎಂದು ಕನ್ನಡ ವಿದ್ಯಾರ್ಥಿಗಳಿಗೆ ಅಚ್ಚು ಮೆಚ್ಚಿನ ಪ್ರಾಧ್ಯಾಪಕರಾಗಿ, ಕವಿ,ಸಾಹಿತಿ, ಲೇಖಕರಾಗಿ ಖ್ಯಾತರಾದ ಹಿರಿಯ ಸಾಹಿತಿಯೆಂದರೆ ಡಾ. ಬಿ.ಬಿ.ಪೂಜಾರಿಯವರು. ಇವರು ಬೀದರ ಜಿಲ್ಲೆ ಹುಮನಾಬಾದಿನ ಶ್ರೀ ಬಂಡೆಪ್ಪ ಮತ್ತು ವೀರಮ್ಮ ದಂಪತಿಗಳಿಗೆ ದಿನಾಂಕ 1-8-1959ರಲ್ಲಿ ಜನಿಸಿದ್ದಾರೆ. ಎಂ.ಎ.ಪಿ.ಎಚ್.ಡಿ ಪದವಿಧರರಾದ ಇವರು 1986ರಿಂದ ಮಹಾರಾಷ್ಟ್ರ ಸೊಲ್ಲಾಪುರದ ಸಂಗಮೇಶ್ವರ ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ 2019ರಲ್ಲಿ ನಿವೃತ್ತರಾಗಿದ್ದು, ಮತ್ತು 2020ರಿಂದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತು ಸಾಹಿತ್ಯದಲ್ಲಿಯು ತುಂಬ ಆಸಕ್ತರಾಗಿ ಕತೆ, ಕವನ, ಹನಿಗವನ, ಲೇಖನ, ಪ್ರಬಂಧ ಮೊದಲಾದ ಬರಹಗಳು ಬರೆದ ಇವರು 'ಮೂರು ಬಣ್ಣ ನೂರು ಕವನ, ನಮ್ಮ ದನಿಗೆ ನಿಮ್ಮ ದನಿ, ಜನಮನ ಗೆದ್ದವರು, ಚಿಟ್ಟೆ ಬಂತು ಚಿಟ್ಟೆ, ಮುಕುಂದೂರು ಸ್ವಾಮಿ, ಕರ್ಮಯೋಗಿ, ಗಂಗಮ್ಮನ ಬೋರ್.' ಎಂಬಿತ್ಯಾದಿ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ಕನ್ನಡದ ಪ್ರಮುಖ ವಿವಿಧ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು 10ವರ್ಷ ಮಹಾರಾಷ್ಟ್ರ ರಾಜ್ಯದ ಕನ್ನಡ ಪಠ್ಯ ಪುಸ್ತಕ ಮಂಡಳಿಯ ಸದಸ್ಯರಾಗಿ, ಶಿವಾಜಿ ಮತ್ತು ಸೊಲ್ಲಾಪುರ ವಿಶ್ವ ವಿದ್ಯಾಲಯದ ಅಭ್ಯಾಸ ಮಂಡಳಿಯ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮತ್ತು ಏಳು ವಿದ್ಯಾರ್ಥಿಗಳು ಇವರ ಮಾರ್ಗದರ್ಶನದಲ್ಲಿ ಪಿ.ಎಚ್‌.ಡಿ.ಪದವಿ ಪಡೆದಿದ್ದಾರೆ. ಇವರಿಗೆ ದರ್ಶನ ರತ್ನ, ಗಡಿ ಕನ್ನಡ ವೀರ, ಮಿನಿ ಕವಿತೆಗಳ ಸರದಾರ. ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಸದ್ಯ ಇವರು ಕಲಬುರಗಿಯಲ್ಲಿ ವಾಸವಾಗಿದ್ದು ಸಾಹಿತ್ಯ ಕೃಷಿಯನ್ನು ಮುಂದುವರೆಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ