ಪುಟಗಳು

ಮಂಗಳವಾರ, ಜನವರಿ 14, 2025

ಡಾ. ನಿಜಲಿಂಗ ಆರ್ ರಗಟೆ

ಸಾಹಿತಿ ನಿಜಲಿಂಗ ಆರ್.ರಗಟೆ ಯವರು. ಮೂಲತಃ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚುಮ್ಮನಚೋಡ ಗ್ರಾಮದ ರಾಜಗುರು ಮತ್ತು ಇರಮ್ಮಾ ದಂಪತಿಗಳಿಗೆ ದಿನಾಂಕ ೪-೧೧-೧೯೭೮ರಲ್ಲಿ ಜನಿಸಿದ್ದಾರೆ. ಎಂ.ಬಿ.ಎ.ಮತ್ತು ಡಿ.ಸಿ.ಎ.ಪದವಿ ಪಡೆದ ಇವರು ಭಾಲ್ಕಿಯ ಡಿ.ಸಿ.ಸಿ ಬ್ಯಾಂಕ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು `ಕನ್ನಡ ಒಡಲು', `ಕನ್ನಡ ಕಣಜ', `ನನ್ನ ಕವನ' (ಕವನ ಸಂಕಲನಗಳು) `ಕಥಾಗುಚ್ಚ' (ಕಥಾ ಸಂಕಲನ) `ಸಿರಿವಂತನ ದರ್ಪ' (ನಾಟಕ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ಸಂಯುಕ್ತ ಕರ್ನಾಟಕ, ಬೀದರ ರಹಸ್ಯ, ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರು ೨೦೦೧ರಿಂದ ೨೦೦೫ರವರೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ್ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸಾಹಿತ್ಯ ಸಿಂಚನ ಬೆಂಗಳೂರು ಮತ್ತು ಬಿಜಾಪುರ ಲೇಖಕರ ಬಳಗದಿಂದ ರಾಜ್ಯ ಮಟ್ಟದ ಪ್ರಶಸ್ತಿ, ಶಹಾಪೂರ ಸಾಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ, ಕಾಸರಗೋಡಿನ ರಾಜ್ಯಮಟ್ಟದ ಕವಿ ಸಮ್ಮೇಳನದಲ್ಲಿ ಕವಿರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಅಷ್ಟೇಯಲ್ಲದೆ ಇವರಿಗೆ ನ್ಯಾಷನಲ್ ವರ್ಚುಲ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿಯು ನೀಡಿ ಗೌರವಿಸಲಾಗಿದೆ. ಹಾಗೂ ನೈಜದೀಪ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ ಹಾಗೂ ಚಿಂಚೋಳಿ ತಾಲೂಕಿನ ಚಿಮ್ಮನಚೋಡದಲ್ಲಿ ಕೆಲವು ಕಾರ್ಯಕ್ರಮಗಳು ಮಾಡಿ ಸಾಹಿತಿ, ಕಲಾವಿದರಿಗೆ ಪ್ರಶಸ್ತಿ ಪುರಸ್ಕಾರಗಳು ನೀಡಿ ಪ್ರೊತ್ಸಾಹಿಸುತ್ತಿದ್ದಾರೆ. ಇವರಿಗೆ ೨೦೨೧ ಜನೆವರಿ ೨೧ ರಂದು ಬೀದರ ತಾಲೂಕಾ ೨ನೇ ತಾಲೂಕಾ ಯುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೌರವಿಸಲಾಗಿದೆ. ಸದ್ಯ ಇವರು ಬೀದರನಲ್ಲಿ ವಾಸವಾಗಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ