ಕನ್ನಡ ಮತ್ತು ಮರಾಠಿ ಭಾಷೆಗಳೆರಡರಲ್ಲೂ ಸಾಹಿತ್ಯ ರಚಿಸಿದ ಕವಿಯೆಂದರೆ ಗುರುಲಿಂಗಪ್ಪ ಜೈರಾಮಕರ್. ಇವರು ಭಾಲ್ಕಿ ತಾಲೂಕಿನ ಧನ್ನೂರಾ ಗ್ರಾಮದ ರುದ್ರಪ್ಪ ಮತ್ತು ಮಲ್ಲಮ್ಮ ದಂಪತಿಗಳಿಗೆ ದಿನಾಂಕ ೧೫-೮-೧೯೩೫ರಲ್ಲಿ ಜನಿಸಿದ್ದಾರೆ. ಏಳನೇ ತರಗತಿಯವರೆಗೆ ಶಿಕ್ಷಣ ಪಡೆದ ಇವರು ಬಾಲ್ಯದಿಂದಲೇ ಹಾಡುವ ಕಲೆಯನ್ನು ಕರಗತ ಮಾಡಿಕೊಂಡು ಸ್ವತಃ ಹಾಡು ಪದ್ಯ ಭಜನೆ ಗೀತೆಗಳನ್ನು ರಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ