ಮಂಗಳವಾರ, ಜನವರಿ 14, 2025
ಶ್ರೀದೇವಿ ಎಂ.ಖಂಡಾಳೆ.
ಉದಯೋನ್ಮುಖ ಕವಯತ್ರಿಯಾದ ಶ್ರೀದೇವಿ ಎಂ.ಖAಡಾಳೆಯವರು ಬಸವಕಲ್ಯಾಣ ತಾಲೂಕಿನ ಮಹಾದಪ್ಪ ಖಂಡಾಳೆ ಮತ್ತು ನಾಗಮ್ಮ ದಂಪತಿಗಳಿಗೆ ದಿನಾಂಕ ೪-೧೧-೧೯೮೪ ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಇಡಿ ಪದವಿಧರರಾದ ಇವರು ಬೀದರ ತಾಲೂಕಿನ ಸರ್ಕಾರಿ ಪ್ರೌಢ ಶಾಲೆ ಮನ್ನಳಿಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಲೆ ಸಾಹಿತ್ಯದಲ್ಲಿ ಆಸಕ್ತರಾಗಿ ಅನೇಕ ಕವನ,ಲೇಖನ ಹನಿಗವನಗಳನ್ನು ಬರೆದಿದ್ದು,ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ಕವನ ವಾಚನ ಮತ್ತು ಉಪನ್ಯಾಸವು ನೀಡಿ ಸುಮಧುರ ಕಂಠದಿAದ ಗಾಯನ ಮಾಡಿ ಕೇಳುಗರ ಮನಸೂರೆಗೊಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ