ಶುಕ್ರವಾರ, ಜನವರಿ 10, 2025
ಬಾ.ನಾ.ಸೊಲ್ಲಾಪೂರೆ
`ಬಾಲಕ' ಎಂಬ ಕಾವ್ಯನಾಮದಿಂದ ಖ್ಯಾತರಾದ ಇವರ ನಿಜನಾಮ ಬಾಬು ತಂದೆ ನಿಂಗಪ್ಪಾ ಸೊಲ್ಲಾಪೂರೆ. ಎಂದಾಗಿದೆ. ಇವರು ಬೀದರ ಜಿಲ್ಲೆ ಕಮಲನಗರ ತಾಲೂಕಿನ ನಾಗಪ್ಪ ಹಾಗೂ ಲಕ್ಷಿö್ಮÃಬಾಯಿ ದಂಪತಿಗಳಿಗೆ ದಿನಾಂಕ ೨-೪-೧೯೫೨ರಲ್ಲಿ ಜನಿಸಿದ್ದಾರೆ. ಎಂ.ಎ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಧರರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ೨೦೧೨ ರಲ್ಲಿ ನಿವೃತ್ತಿ ಹೊಂದಿದ್ದಾರೆ. ಕವಿ, ಸಾಹಿತಿ, ಚಿಂತನಕಾರರಾಗಿ ಕೆಲ ಕೃತಿಗಳು ರಚಿಸಿದ್ದಾರೆ, ಅವುಗಳೆಂದರೆ, `ಶಿವಾನುಭವ ಗೋಷ್ಠಿಯಲ್ಲಿ ಬಸವಧರ್ಮ’, `ಮನದಳಲು’, `ಪವಿತ್ರ ಶರಣ ಜೀವಿಗಳು’ (ಲೇಖನ) `ಗಾದೆ ಮೇಲೆ ಕುಳಿತು ಕೊಂಡು’ (ಮಕ್ಕಳ ಕೃತಿ) `ಗುರು-ಮೈತ್ರಿ, `ಚುಳುಕಿ’ (ಸಂ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಕವನ, ಲೇಖನ, ಚಿಂತನ ಬರಹಗಳು ನಾಡಿನ ಕೆಲ ಪ್ರಮುಖ ಪತ್ರಿಕೆಗಳಲ್ಲಿ ಹಾಗೂ ಆಕಾಶವಾಣಿ, ದೂರದರ್ಶಗಳಲ್ಲಿ ಪ್ರಕಟ, ಪ್ರಸಾರವಾಗಿವೆ. ಇವರು ಕಮಲನಗರದಲ್ಲಿ ೧೦೮ ಶಿವಾನುಭವಗೊಷ್ಠಿ ನಡೆಸಿದ್ದು, ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಇದ್ದುಕೊಂಡು ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ