ಭಾನುವಾರ, ಜನವರಿ 19, 2025
ಪ್ರಭುಲಿಂಗಯ್ಯಾ ಬಿ.ಟಂಕಸಾಲಿಮಠ
ಚಿತ್ರಕಲಾವಿದ, ಸಾಹಿತಿ, ಪತ್ರಕರ್ತರಾಗಿ ಪುಸ್ತಕ ಪ್ರಕಟಿಸಿದ ಲೇಖಕರೆಂದರೆ ಪ್ರಭುಲಿಂಗಯ್ಯಾ ಟಂಕಸಾಲಿಮಠ ಇವರು ಬೀದರ ಜಿಲ್ಲೆ ಹುಮನಾಬಾದಿನ ಬಸಯ್ಯಾ ಮತ್ತು ವಿದ್ಯಾವತಿ ದಂಪತಿಗಳಿಗೆ ದಿನಾಂಕ ೧೯-೯-೧೯೭೩ರಲ್ಲಿ ಜನಿಸಿದ್ದಾರೆ. ಚಿತ್ರಕಲೆಯಲ್ಲಿ ಸ್ನಾತಕೋತರ ಪದವಿಧರರಾದ ಇವರು ೨೫ವರ್ಷಗಳಿಂದ ಬಸವಕಲ್ಯಾಣದಲ್ಲಿ ಶ್ರೀ ಬಸವೇಶ್ವರ ಚಿತ್ರಕಲಾ ಮಹಾವಿದ್ಯಾಲಯ ಸ್ಥಾಪಿಸಿ ಅದರ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಕಲೆ ಸಾಹಿತ್ಯದಲ್ಲಿ ಆಸಕ್ತರಾದ ಇವರು `ಚಿತ್ರ-ಚಿತ್ತ', `ಕಲ್ಯಾಣ ಕಲಾಶ್ರೀ', `ಚಿಣ್ಣರ ಚುಟುಕು', `ಕಲ್ಯಾಣದ ಕಲಾ ಪ್ರತಿಭೆ', `ಹತ್ತು ಮುಖಗಳ ನೂರು ಭಾವಗಳು', `ಸಾಲು- ದೀಪ' ಎಂಬ ಕೃತಿಗಳು ತಮ್ಮ ಕಲಾನಿಕೇತನ ಪ್ರಕಾಶನದಿಂದ ಸಂಪಾದಿಸಿ ಪ್ರಕಟಿಸಿದ್ದಾರೆ. ೨೦೦೭ರಿಂದ ೨೦೧೦ ರವರೆಗೆ ಬಸವಕಲ್ಯಾಣ ಕಸಾಪ ಅಧ್ಯಕ್ಷರಾಗಿ, ಉತ್ತರ ಕರ್ನಾಟಕ ಪತ್ರಿಕೆಯ ವರದಿಗಾರರಾಗಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಕಲಬುರಗಿಯ ಮಹಾನ್ ಚಿತ್ರಕಲಾವಿದ `ಡಾ.ಜೆ.ಎಸ್.ಖಂಡೇರಾವ ಪ್ರಶಸ್ತಿ, ಭಾಲ್ಕಿ ಮಠದಿಂದ ಡಾ.ಚನ್ನಬಸವ ಪಟ್ಟದೇವರ ಪ್ರಶಸ್ತಿ, ಹಾರಕೂಡ ಮಠದಿಂದ `ಶ್ರೀಚನ್ನ ರತ್ನ ಪ್ರಶಸ್ತಿ, ಹುಲಸೂರು ಮಠದಿಂದ `ಕಲಾ ಪ್ರೇಮಿ' ಭಾತಂಬ್ರಾ ಮಠದಿಂದ `ಕಲಾ ರತ್ನ' ಮತ್ತು ಬಸವಕಲ್ಯಾಣ ತಾಲೂಕಾ `ಗಣರಾಜ್ಯೋತ್ಸವ' ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಗಳು ಲಭೀಸಿವೆ. ಸದ್ಯ ಇವರು ಬಸವಕಲ್ಯಾಣದಲ್ಲಿ ವಾಸವಾಗಿದ್ದು, ಅಪಾರ ಅಂಚೆ ಚೀಟಿ ಮತ್ತು ನಾಣ್ಯ ಸಂಗ್ರಹ ಮಾಡಿರುವುದರೊಂದಿಗೆ ಸೃಜನಶೀಲ ಸಾಹಿತ್ಯ ರಚನೆಯಲ್ಲಿ ತೊಡಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ