ಶನಿವಾರ, ಜನವರಿ 11, 2025
ಬಸಪ್ಪ ಜಿ.ಬಾವಗೆ
ಸಾಹಿತಿ ಬಸಪ್ಪ ಜಿ. ಬಾವಗೆಯವರು ಬೀದರ ಜಿಲ್ಲೆ ಹುಮನಾಬಾದ ತಾಲ್ಲೂಕಿನ ಕಬೀರಾಬಾದವಾಡಿಯ ಗಣಪತಿ ಮತ್ತು ಪಾರಮ್ಮ ದಂಪತಿಗಳಿಗೆ ದಿನಾಂಕ ೨-೬-೧೯೭೫ರಲ್ಲಿ ಜನಿಸಿದ್ದಾರೆ. ಬಿ.ಎ. ಬಿ.ಇಡಿ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಪಡೆದ ಇವರು ಕಲಬುರಗಿ ಜಿಲ್ಲೆ ಜೇವರ್ಗಿಯ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕೆಲಕಾಲ ಬೀದರ ಜಿಲ್ಲೆಯಲ್ಲಿ ಶಿಕ್ಷಕರಾಗಿ, ಅರ್ಭಿಟ್ ಸಂಸ್ಥೆಯ ವರದಿಗಾರರಾಗಿ `ಜನ ಸನ್ನಿಧಿ' ಎಂಬ ದ್ವೈಮಾಸಿಕ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾದ ಇವರು `ಅರಿವಿನ ಹಾಡುಗಳು' ಎಂಬ ಹಾಡುಗಳು ಸಂಪಾದಿಸಿ ಪ್ರಕಟಿಸಿದ್ದಾರೆ. ಮತ್ತು `ಬೀದರ ಜಿಲ್ಲೆಯ ಪ್ರಗತಿ ಪಥದತ್ತ ಮಹಿಳೆಯರು' ಎಂಬ ಕೃತಿಯು ರಚಿಸಿ ಪ್ರಕಟಿಸಿದ್ದಾರೆ. ಇವರ ಬರಹಗಳು ನಾಡಿನ ಪ್ರಮುಖ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ಹುಮನಾಬಾದ ತಾಲೂಕಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ