ಪುಟಗಳು

ಮಂಗಳವಾರ, ಜನವರಿ 14, 2025

ಬಕ್ಕಯ್ಯ ಸ್ವಾಮಿ

ಸಾಹಿತಿ ಬಕ್ಕಯ್ಯ ಸ್ವಾಮಿಯವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ತ್ರಿಪೂರಾಂತದ ಶ್ರೀ.ವೇ.ಮೂ. ಬಸ್ಸಯ್ಯಾ ಸ್ವಾಮಿ ಮತ್ತು ನಿಂಬೆವ್ವ ದಂಪತಿಗಳಿಗೆ ದಿನಾಂಕ ೧-೩-೧೯೪೯ರಲ್ಲಿ ಜನಿಸಿದ್ದಾರೆ. ಟಿ.ಸಿ.ಎಚ್ ಪದವಿಧರರಾದ ಇವರು ಪ್ರಾಥಮಿಕ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಕವನ, ಲೇಖನ, ಚಿಂತನಗಳು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಕಸಾಪ, ಜಾನಪದ, ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ಇವರು ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಲಭೀಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ