ಪುಟಗಳು

ಶುಕ್ರವಾರ, ಜನವರಿ 10, 2025

ದೇವೆಂದ್ರ ಕಟ್ಟಿಮನಿ

ಸೃಜನಶೀಲ ಉದಯೋನ್ಮುಖ ಬರಹಗಾರರೆಂದರೆ ದೇವೆಂದ್ರ ಕಟ್ಟಿಮನಿ. ಇವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಿಪ್ಪರಗಾ ಭಾಗ ಗ್ರಾಮದ ಶ್ರೀ ಅಂಬಣ್ಣ ಮತ್ತು ಶ್ರೀಮತಿ ಕಾಶಿಬಾಯಿ ದಂಪತಿಗಳಿಗೆ ದಿನಾಂಕ ೫-೯-೧೯೮೩ರಲ್ಲಿ ಜನಿಸಿದ್ದಾರೆ. ಬಿ.ಎ. ಬಿ.ಪಿ.ಇಡಿ. ಎಂ.ಎ. ಸ್ನಾತಕೋತ್ತರ ಪದವೀಧರರಾದ ಇವರು ರಾಯಚೂರು ಜಿಲ್ಲೆಯ ಇಡಪನೂರು ಸರ್ಕಾರಿ ಉರ್ದು ಪ್ರೌಢ ಶಾಲಾ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾದ ಇವರು ೨೦೨೦ರಲ್ಲಿ `ಭೀಮಾಮೃತ' (ಕವನ ಸಂಕಲನ) `ಅರಳಿ ನೆರಳು, ಸುಣ್ಣದ ಸಾಲು' (ಗಜಲ್ ಸಂಕಲನ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ನಾಡಿನ ಪ್ರಮುಖ ಪತ್ರಿಕೆ ಹಾಗೂ ಆಕಾಶವಾಣಿಗಳಲ್ಲಿ ಪ್ರಕಟ, ಪ್ರಸಾರವಾಗಿವೆ. ಇವರಿಗೆ ೨೦೦೪ರಲ್ಲಿ ಕಲಬುರಗಿಯ ಡಾ.ಬಿ.ಆರ್. ಅಂಬೇಡ್ಕರ್ ವಿಚಾರ ವೇದಿಕೆ ವತಿಯಿಂದ ಏರ್ಪಡಿಸಿದ ಕವನ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ. ೨೦೧೫ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಉತ್ತಮ ಸ್ಕೌಟ್ ಮಾಸ್ಟರ್ ಪ್ರಶಸ್ತಿ, ೨೦೧೯ರಲ್ಲಿ ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ಲಭಿಸಿದೆ. ಅಷ್ಟೇಯಲ್ಲದೆ ಇವರು ತಮ್ಮ ಹುಟ್ಟೂರಿನಲ್ಲಿ ಶ್ರೀಅಂಬಣ್ಣಾ ಕಟ್ಟಿಮನಿ ಸ್ಮರಣಾರ್ಥ `ಅಭಿಜ್ಞಾನ' ಪ್ರಶಸ್ತಿಯು ನೀಡಿ ಗೌರವಿಸುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ