ಮಂಗಳವಾರ, ಜನವರಿ 14, 2025
ಅಂಬರೀಶ್ ಎಂ.ಭಿಮಾಣಿ
ಹವ್ಯಾಸಿ ಬರಹಗಾರ ಅಂಬರೀಶ್ ಎನ್.ಭಿಮಾಣಿ ರವರು ಬಸವಕಲ್ಯಾಣ ತಾಲೂಕಿನ ಚಿತ್ತಕೊಟಾ (ಕೆ) ಗ್ರಾಮದ ಸುಬ್ಬಣ್ಣ ಮತ್ತು ರಾಚಮ್ಮ ದಂಪತಿಗಳಿಗೆ ದಿನಾಂಕ ೨೨-೬-೧೯೯೩ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಇಡಿ. ಪದವಿಧರರಾದ ಇವರು ಬಸವಕಲ್ಯಾಣದ ಖಾಸಗಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ಆಸಕ್ತರಾಗಿ ಕವನ, ಲೇಖನ, ಗಜಲ್ ಮೊದಲಾದವು ರಚಿಸುತ್ತಿದ್ದಾರೆ. ಇವರ ಬರಹಗಳು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ಅನೇಕ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿಗಳಲ್ಲಿ ಕವನ ವಾಚನ ಮಾಡಿದ್ದಾರೆ. ಇವರಿಗೆ ೨೦೧೯ರಲ್ಲಿ ಬಸವಕಲ್ಯಾಣ ತಾಲೂಕಾ ಕನ್ನಡ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ