ಶನಿವಾರ, ಜನವರಿ 11, 2025
ಶಿವರಾಜ ಮೇತ್ರೆ
ಸಾಹಿತಿ ಶಿವರಾಜ ಮೇತ್ರೆಯವರು. ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ತಾಳಮಡಗಿ ಗ್ರಾಮದ ದವಲಪ್ಪಾ ಮತ್ತು ಕಮಲಾಬಾಯಿ ದಂಪತಿಗಳಿಗೆ ದಿನಾಂಕ ೨೨-೭-೧೯೭೪ರಲ್ಲಿ ಜನಿಸಿದ್ದಾರೆ. ಪಿ.ಯು.ಸಿ. ಟಿ.ಸಿ.ಎಚ್ ಶಿಕ್ಷಣ ಪಡೆದು ೨೦೦೨ರಿಂದ ಪ್ರಾಥಮಿಕ ಶಿಕ್ಷಕರಾಗಿ ಸೇವೆಗೆ ಸೇರಿ ಸದ್ಯ ದುಮ್ಮನಸೂರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ೨೦೧೯ರಲ್ಲಿ `ಕಾವ್ಯ ಬುಗ್ಗೆ' (ಕವನ ಸಂಕಲನ) ಪ್ರಕಟಿಸಿದ್ದಾರೆ. ಮತ್ತು ಇವರ ಬರಹಗಳು ನಾಡಿನ ಕೆಲ ಪತ್ರಿಕೆಗಳಲ್ಲಿ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ಬೆಂಗಳೂರಿನ ವಿಶ್ವ ವಚನ ಟ್ರಸ್ಟ್ ವತಿಯಿಂದ `ಚಿನ್ಮಯ ಜ್ಣಾನಿ ಪ್ರಶಸ್ತಿ, ಬೀದರಿನ ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ ಕವಿಜ್ಯೋðತಿ ಪ್ರಶಸ್ತಿ, ಭಾರತದ ಸೇವಾದಲ ಸಹಾಯಕ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ, ಸದ್ಯ ಇವರು ಹುಮನಾಬಾದ ತಾಲ್ಲೂಕಿನ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅವಧಿಯಲ್ಲಿ ಪ್ರಥಮ ಹುಮನಾಬಾದ ದಲಿತ ತಾಲೂಕಾ ಸಾಹಿತ್ಯ ಸಮ್ಮೇಳನವು ಅದ್ದೂರಿಯಾಗಿ ನಡೆಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ