ಮಂಗಳವಾರ, ಜನವರಿ 14, 2025
ರಮೇಶ ಸಲಗರ
ಉದಯೋನ್ಮುಖ ಬರಹಗಾರ ರಮೇಶ ಸಲಗರ ರವರು ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದ ಚಂದ್ರಶೆಟ್ಟಿ ಮತ್ತು ಗೌರಮ್ಮ ದಂಪತಿಗಳಿಗೆ ದಿನಾಂಕ ೧೫-೧೧-೧೯೬೮ ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಎಡ್ ಪದವಿಧರರಾಗಿರುವ ಇವರು ಮುಸ್ತರಿಯಲ್ಲಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮತ್ತು ಕತೆ ಕವನ ಲೇಖನ ಚುಟುಕು ರೂಪಕಗಳನ್ನು ಬರೆದಿದ್ದಾರೆ. `ಶರಣ ಸಂಸ್ಕೃತಿ' ಮತ್ತು `ಕಂದಾಚಾರ' ಎಂಬ ರೂಪಕಗಳನ್ನು ಬರೆದು ನಿರ್ದೇಶಕರಾಗಿ ಬಸವಕಲ್ಯಾಣ ಅನುಭವ ಮಂಟಪದ ಶರಣ ಕಮ್ಮಟದಲ್ಲಿ ಹಾಗೂ ಕೊಡಂಬಲ ಮೊದಲಾದ ಹಳ್ಳಿಗಳಲ್ಲಿ ಪ್ರದರ್ಶಿಸಿದ್ದಾರೆ. ಇವರ ಬರಹಗಳು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಹಾಗೂ ಆಕಾಶವಾಣಿಯಲ್ಲಿ ಪ್ರಕಟ ಪ್ರಸಾರವಾಗಿವೆ. ಇವರಿಗೆ `ಜನ ಮೆಚ್ಚಿದ ಶಿಕ್ಷಕ', `ಶಿಕ್ಷಕ ರತ್ನ', `ಶಿಕ್ಷಣ ಸಿರಿ' `ಆದರ್ಶ ಶಿಕ್ಷಕ ' ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಮತ್ತು ಇವರು ಚಿಟಗುಪ್ಪ ತಾಲೂಕು ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ