ಪುಟಗಳು

ಮಂಗಳವಾರ, ಜನವರಿ 14, 2025

ಅಂಬಾರಾವ ಉಗಾಜಿ

ಹವ್ಯಾಸಿ ಬರಹಗಾರ ಅಂಬಾರಾಯ ಉಗಾಜಿಯವರು. ಬಸವಕಲ್ಯಾಣ ತಾಲೂಕಿನ ಕೊಹಿನೂರು ಗ್ರಾಮದ ಸಾಯಬಣ್ಣ ಮತ್ತು ರುಕ್ಮಿಣಿಬಾಯಿ ದಂಪತಿಗಳಿಗೆ ದಿನಾಂಕ ೨೨-೭-೧೯೭೦ರಲ್ಲಿ ಜನಿಸಿದ್ದಾರೆ. ಬಿ.ಎ. ಬಿ.ಇಡಿ. ಪದವಿಧರರಾದ ಇವರು ಬೊಸಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕ ವೃತ್ತಿಗೆ ಸೇರಿದ ನಂತರ ಸಾಹಿತ್ಯ ರಚನೆಯ ಗೀಳು ಬೆಳೆಸಿಕೊಂಡ ಕವನ, ಲೇಖನ, ಹನಿಗವನ, ಚುಟುಕು, ಆಧುನಿಕ ವಚನಗಳನ್ನು ಬರೆದಿದ್ದಾರೆ. ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು ಸಾಹಿತ್ಯಿಕ ಸಂಘಟಕರು ಆಗಿರುವುದರಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡು ಅವಧಿ ಕೊಹಿನೂರು ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ `ಜನ ಮೆಚ್ಚಿದ ಉತ್ತಮ ಶಿಕ್ಷಕ ಪ್ರಶಸ್ತಿ, ಹಾರಕೂಡ ಹಿರೇಮಠ ಸಂಸ್ಥಾನದ ವತಿಯಿಂದ `ಶ್ರೀ ಚೆನ್ನರತ್ನ ಪ್ರಶಸ್ತಿ, ಕಸಾಪದ ಸಮಾಜ ರತ್ನ ಪ್ರಶಸ್ತಿ, ಎಸ್ಸಿ, ಎಸ್ಟಿ, ಶಿಕ್ಷಕರ ಸಂಘದ ಉತ್ತಮ ಶಿಕ್ಷಕ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಹಾಗೂ ಅಜಿಂ ಪ್ರೇಮಂ ಜಿ ಫೌಂಡೇಶನ್ ವತಿಯಿಂದ ಇವರಿಗೆ ಅಭಿನಂದನಾ ಪತ್ರವು ನೀಡಿ ಗೌರವಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ