ಪುಟಗಳು

ಭಾನುವಾರ, ಜನವರಿ 12, 2025

ಡಾ. ರಾಜಕುಮಾರ ಹೆಬ್ಬಾಳೆ

ಯುವ ಬರಹಗಾರ ಡಾ.ರಾಜಕುಮಾರ ಹೆಬ್ಬಾಳೆ ಯವರು. ಬೀದರ ನಾವದಗೇರಿ ಗ್ರಾಮದ ಬಸವರಾಜ ಹೆಬ್ಬಾಳೆ ಮತ್ತು ಗುಂಡಮ್ಮಾ ದಂಪತಿಗಳಿಗೆ ದಿನಾಂಕ ೧-೬-೧೯೮೨ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ ಪದವಿಧರರಾದ ಇವರು ಬೀದರ ಸರ್ಕಾರಿ ಮೆಡಿಕಲ್ ಕಾಲೇಜಿನ ಸಮುದಾಯ ವೈದ್ಯ ಶಾಸ್ತ್ರ ವಿಭಾಗದಲ್ಲಿ ವೈದ್ಯಕೀಯ ಪ್ರಯೋಗಾಲಯದ ತಂತ್ರಜ್ಞರಾಗಿ, ಬ್ರಿಮ್ಸ್ ಕನ್ನಡ ಸಂಘದ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತು `ಕರುಣಾಮಯ ಯುವಕ ಸಂಘ’ ವನ್ನು ಸ್ಥಾಪಿಸಿ, ಕಲೆ, ಸಾಹಿತ್ಯ, ಮತ್ತು ಜಾನಪದಲ್ಲಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ೨೦೦೬ರಲ್ಲಿ ಬೀದರನಲ್ಲಿ ನಡೆದ ೭೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಯಾಗಿ, ೨೦೧೧ರಲ್ಲಿ ಅಖಿಲ ಭಾರತ ಪ್ರಥಮ ಜಾನಪದ ಸಮ್ಮೇಳನದ ಸಂಚಾಲಕರಾಗಿ, ೨೦೧೭ರಲ್ಲಿ ಬೀದರ ಪ್ರಥಮ ಜಿಲ್ಲಾ ಸಾವಯವ ಕೃಷಿ ಸಮ್ಮೇಳನದ ಪ್ರಧಾನ ಕಾರ್ಯದರ್ಶಿಯಾಗಿ, ಯುನಿಸ್ಕೋ ಜನಪದ ವೈದ್ಯ ಪದ್ಧತಿ ಸಂಶೋಧಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಸಂಶೋಧಕರಾಗಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಗ್ರಾಮ ಚರಿತ್ರೆ ಕೋಶದ ಕ್ಷೇತ್ರ ತಜ್ಞ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮತ್ತು `ಕ್ವಾಟಿ ಸಾವಯವ ಸಿರಿ ಮತ್ತು ಕ್ವಾಟಿ ಜಾನಪದ’ ಎಂಬ ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕರಾಗಿ ಪುಸ್ತಕ ಪ್ರಕಟಿಸಿದ್ದಾರೆ. ಇವರಿಗೆ ೧೯೯೭ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ೨೦೦೩ರಲ್ಲಿ ಅತ್ಯುತ್ತಮ ಯುವ ಪ್ರಶಸ್ತಿ, ೨೦೧೧ರಲ್ಲಿ ಸಂಸ್ಕೃತಿ ಮಂತ್ರಾಲಯ ನವದೆಹಲಿಯಿಂದ ಜನಪದ ಸಾಹಿತ್ಯ ಪ್ರಶಸ್ತಿ, ೨೦೧೮-೧೯ರಲ್ಲಿ ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನಿಂದ `ಪರಿಷತ್ ಲೋಕಕಲಾ ಪ್ರಶಸ್ತಿ, ಮತ್ತು ಅಣ್ಣಾ ಹಜಾರೆ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ