ಶನಿವಾರ, ಜನವರಿ 11, 2025
ಡಾ.ಜಗದೇವಿ ತಿಬಶೆಟ್ಟಿ
ಕವಯತ್ರಿ ಡಾ.ಜಗದೇವಿ ತಿಬಶೆಟ್ಟಿಯವರು. ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಬಸವಣಪ್ಪ ಮತ್ತು ಗೋದಾವರಿ ದಂಪತಿಗಳಿಗೆ ದಿನಾಂಕ ೧೭-೯-೧೯೭೨ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಎಡ್.ಪಿ.ಎಚ್.ಡಿ. ನೆಟ್. ಪದವಿಧರರಾದ ಇವರು ಕೆಲ ವರ್ಷ ವಿವಿಧ ಖಾಸಗಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ಸದ್ಯ ಹಾಲಹಳ್ಳಿಯ ಜ್ನಾನ ಕಾರಂಜಿ ಪಿ.ಜಿ.ಸೆಂಟರ್ನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೆ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡ ಇವರು `ಅನರ್ಘ್ಯ ರತ್ನ' (ಲೇಖನ ಸಂಕಲನ) ಮತ್ತು `ಸೋಮನಾಥ ಯಾಳವಾರ' (ಜೀವನ ಚರಿತ್ರೆ) `ಶರಣರ ದಾಂಪತ್ಯ ದರ್ಶನ' ಎಂಬುದು ಇವರ ಪಿ.ಎಚ್.ಡಿ.ಪ್ರಬಂಧವಾಗಿದೆ. ಇವರ ಬಹುತೇಕ ಬರಹಗಳು ನಾಡಿನ ಬಹುತೇಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು ರಾಜ್ಯ, ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಹಾಗೂ ಕಸಾಪ ಸಮ್ಮೇಳನಗಳಲ್ಲಿ ಪಾಲ್ಗೊಂಡು ಹಲವು ಪ್ರಬಂಧಗಳನ್ನು ಮಂಡಿಸಿ ಉಪನ್ಯಾಸವು ನೀಡಿದ್ದಾರೆ. ಇವರಿಗೆ ೨೦೧೯ರಲ್ಲಿ ಚೇತನ ಪ್ರಕಾಶನ ಬೆಂಗಳೂರಿನಿAದ `ಸರೋಜಿನಿ ಚವಲಾರ ರಾಜ್ಯ ಪ್ರಶಸ್ತಿ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರಿನಿAದ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ, ಮತ್ತು ೨೦೧೯ರಲ್ಲಿ ಹಾಸ್ಯ ತರಂಗ ಕಲಾ ಸಂಸ್ಥೆ ಬೆಂಗಳೂರಿನಿAದ ಕಾವ್ಯ ಶಾರದೆ ರಾಜ್ಯ ಪ್ರಶಸ್ತಿ, ೨೦೧೮ರಲ್ಲಿ ಬೀದರ ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ `ಸಮಾಜ ಕಲಾ ರತ್ನ ಪ್ರಶಸ್ತಿ ಸೇರಿದಂತೆ ಮೊದಲಾದ ಪ್ರಶಸ್ತಿ, ಪುರಸ್ಕಾರಗಳು ಪಡೆದಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ