ಮಂಗಳವಾರ, ಜನವರಿ 14, 2025
ದೇವಿಂದ್ರ ವೀ. ಬರಗಾಲೆ
ಯುವ ಬರಹಗಾರ ದೇವಿಂದ್ರ ವೀ.ಬರಗಾಲೆ ಯವರು ಹುಲಸೂರು ತಾಲೂಕಿನ ಬೇಲೂರು ಗ್ರಾಮದ ವೀರಣ್ಣ ಮತ್ತು ಚೆನ್ನಮ್ಮ ದಂಪತಿಗಳಿಗೆ ದಿನಾಂಕ ೪-೭-೧೯೮೦ರಲ್ಲಿ ಜನಿಸಿದ್ದಾರೆ. ಬಿ.ಎ.ಬಿ.ಇಡಿ ಪದವಿಧರರಾದ ಇವರು ೨೦೦೬ರಲ್ಲಿ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆಗೆ ಸೇರಿ, ನಂತರ ೨೦೨೦ರಿಂದ ಕಲಬುರಗಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಲೆಕ್ಕ ಅಧಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತೆ, ಕವನ, ಲೇಖನ, ಹನಿಗವನ, ಆಧುನಿಕ ವಚನ ಮೊದಲಾದವು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ಗುರ್ತಿಸಿ ಕೊಂಡಿದ್ದಾರೆ. ಇವರ ಬರಹಗಳು ತುಷಾರ, ಸಂಯುಕ್ತ ಕರ್ನಾಟಕ ಮೊದಲಾದ ಪತ್ರಿಕೆಗಳಲ್ಲಿ ಮತ್ತು ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ೨೦೧೨ರಿಂದ ಡಾ.ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ೫೦ಕ್ಕೂ ಹೆಚ್ಚು ಉಪನ್ಯಾಸ ಕಾರ್ಯಕ್ರಮಗಳು, ೨ ನಾಟಕ ಪ್ರದರ್ಶನ, ೨ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮಾಡುತ್ತಿದ್ದಾರೆ. ಮತ್ತು ಬಸವಕಲ್ಯಾಣ ತಾಲೂಕಿನ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯದರ್ಶಿಯಾಗಿ, ಕಸಾಪದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ