ಪುಟಗಳು

ಮಂಗಳವಾರ, ಜನವರಿ 14, 2025

ರೇವಣಸಿದ್ದಪ್ಪ ಸೂಗೂರೆ

ಹವ್ಯಾಸಿ ಬರಹಗಾರ ರೇವಣಸಿದ್ದಪ್ಪ ಸೂಗೂರೆ ಯವರು. ಬಸವಕಲ್ಯಾಣ ತಾಲೂಕಿನ ಕೊಹಿನೂರು ಗ್ರಾಮದ ಗುರುಲಿಂಗಪ್ಪ ಮತ್ತು ಸುಗಲಾಬಾಯಿ ದಂಪತಿಗಳಿಗೆ ದಿನಾಂಕ ೧-೮-೧೯೭೩ರಲ್ಲಿ ಜನಿಸಿದ್ದಾರೆ. ಬಿ.ಎ.ಪದವಿಧರರಾದ ಇವರು ಕೃಷಿಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಕವನ, ಲೇಖನ, ಬರಹಗಳು ಬರೆಯುತ್ತಿದ್ದಾರೆ. ಇವರ ಬರಹಗಳು ಕೆಲ ಪತ್ರಿಕೆಗಳಲ್ಲಿ ಹಾಗೂ ಹಾರಕೂಡ ಹಿರೇಮಠ ಸಂಸ್ಥಾನದ ವತಿಯಿಂದ ಹೊರತಂದ `ಚೆನ್ನ ಸಂಭ್ರಮ-೫೭.’ ಮತ್ತು `ಕೊಹಿನೂರು ಕುಸುಮ' ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ಹಾರಕೂಡದ ಪೂಜ್ಯ. ಶ್ರೀ. ಡಾ.ಚೆನ್ನವೀರ ಶಿವಾಚಾರ್ಯರ ೫೫ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಶ್ರೀ ಚೆನ್ನ ರತ್ನ ಪ್ರಶಸ್ತಿ, ನೀಡಿ ಗೌರವಿಸಲಾಗಿದೆ. ಮತ್ತು ಇವರಿಗೆ ಬಸವಕಲ್ಯಾಣ ತಾಲೂಕಾ ಪ್ರಥಮ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿ ಗೌರವಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ