ಶನಿವಾರ, ಜನವರಿ 11, 2025
ಸಮಧಾನ ಬಲ್ಲೂರ್
ಕವಯತ್ರಿಯಾದ ಸಮಧಾನ ಬಲ್ಲೂರ್. ಇವರು ಬೀದರ ಜಿಲ್ಲೆ ಔರಾದ ತಾಲೂಕಿನ ನಿಂಗದಳ್ಳಿ ಗ್ರಾಮದ ಮಾದಪ್ಪ ಮತ್ತು ರತ್ನಮ್ಮಾ ದಂಪತಿಗಳಿಗೆ ದಿನಾಂಕ ೪-೪-೧೯೬೨ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಇಡಿ. ಸ್ನಾತಕೋತ್ತರ ಪದವೀಧರರಾದ ಇವರು ಶಿಕ್ಷಕರಾಗಿ, ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ತುಂಬ ಆಸಕ್ತರಾದ ಇವರು ನೂರಾರು ಕವನಗಳು ಬರೆದಿದ್ದು, ೨೦೦೬ರಲ್ಲಿ `ಕಾವ್ಯ ಸ್ಪೂರ್ತಿ' ಎಂಬ ಕವನ ಸಂಕಲನವು ಪ್ರಕಟಿಸಿದ್ದಾರೆ. ಈ ಕೃತಿಗೆ ಬೆಂಗಳೂರಿನ ಬೆಳ್ಳಿ ದೀಪ ಸಂಘದ ಕಾವ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಲಭಿಸಿದೆ. ಅಷ್ಟೇಯಲ್ಲದೆ ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭೀಸಿವೆ. ಇವರ ಬರಹಗಳು ನಾಡಿನ ಕೆಲ ಪ್ರಮುಖ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ