ಶುಕ್ರವಾರ, ಜನವರಿ 10, 2025
ಡಾ. ಶಿವಾಜಿ ಮೇತ್ರೆ
ಸಾಹಿತಿ ಡಾ.ಶಿವಾಜಿ ಮೇತ್ರೆ.ಯವರು ಬೀದರ ಜಿಲ್ಲೆ ಹುಲಸೂರು ತಾಲೂಕಿನ ಗಡಿಗೌಂಡಗಾAವ ಗ್ರಾಮದ ತುಕಾರಾಮ ಮೇತ್ರೆ ಮತ್ತು ಸುಗಲಾಬಾಯಿ ದಂಪತಿಗಳಿಗೆ ದಿನಾಂಕ ೨೯-೭-೧೯೭೫ರಲ್ಲಿ ಜನಿಸಿದ್ದಾರೆ. ಎಂ.ಎ.ಎA.ಫೀಲ್. ಪಿ.ಎಚ್.ಡಿ.ಬಿ.ಇಡಿ ಪದವಿಧರರಾದ ಇವರು ೨೦೦೭ರಿಂದ ಕಲಬುರಗಿ ನೂತನ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯ ಮತ್ತು ವಿಮರ್ಶಾ ಬರವಣಿಗೆಯಲ್ಲಿ ತೊಡಗಿದ್ದ ಇವರು ೨೦೧೨ರಲ್ಲಿ `ಉರಿಯ ಮಂಟಪ' ಎಂಬ ವಿಮರ್ಶಾ ಕೃತಿಯು ಪ್ರಕಟಿಸಿದ್ದಾರೆ. ಇವರ ಬರಹಗಳು ಪ್ರಮುಖ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ರಾಜ್ಯ, ರಾಷ್ಟç ಮಟ್ಟದ ವಿಚಾರ ಸಂಕಿರಣ ಹಾಗೂ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಪ್ರಬಂಧ ಮತ್ತು ಉಪನ್ಯಾಸವನ್ನು ಮಂಡಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ವತಿಯಿಂದ ಆಯೋಜಿಸಿದ್ದ ್ಲ ಕುವೆಂಪು ಓದು ಕಮ್ಮಟದ ಸಂಚಾಲಕನಾಗಿ, ಪದವಿ ಪೂರ್ವ. ಶಿಕ್ಷಣ ಇಲಾಖೆ ಕನ್ನಡ ಉಪನ್ಯಾಸಕರ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ ಇವರು ಬಸವಕಲ್ಯಾಣದ ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ