ಪುಟಗಳು

ಭಾನುವಾರ, ಜನವರಿ 12, 2025

ಡಾ. ಮಹಾದೇವಿ ಹೆಬ್ಬಾಳೆ

ಸಾಹಿತಿ ಡಾ.ಮಹಾದೇವಿ ಹೆಬ್ಬಾಳೆ. ಇವರು ಬೀದರ ತಾಲೂಕಿನ ನಾವದಗೇರಿ ಗ್ರಾಮದ ಬಸವರಾಜ ಹೆಬ್ಬಾಳೆ ಮತ್ತು ಗುಂಡಮ್ಮಾ ದಂಪತಿಗಳಿಗೆ ದಿನಾಂಕ ೪-೩-೧೯೮೪ರಲ್ಲಿ ಜನಿಸಿದ್ದಾರೆ. ಬಿ.ಎಡ್.ಎಂ.ಎ. ಎಂ.ಫಿಲ್. ಪಿ.ಹೆಚ್.ಡಿ. ಪದವಿಧರರಾದ ಇವರು ಸರ್ಕಾರಿ ಪ್ರಥಮ ದರ್ಜೆಯ ಕಾಲೇಜು ಹುಮನಾಬಾದನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ೨೦೧೧ರಲ್ಲಿ `ಬೀದರ್ ಜಿಲ್ಲಾ ದೇವರೊತ್ಸವಗಳು’ (ಸಂಶೋಧನಾ) ಮತ್ತು `ಆಧುನಿಕ ಕವಿತೆಗಳ ಸಂಗ್ರಹ' ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಆಧುನಿಕ ಕವಿತೆಗಳ ಸಂಗ್ರಹ ಪುಸ್ತಕವು ಗುಲ್ಬರ್ಗ ವಿಶ್ವವಿದ್ಯಾಲಯ ಬಿ.ಎಸಿ.ಪ್ರಥಮ ವರ್ಷದ ವಿಧ್ಯಾರ್ಥಿಗಳಿಗೆ ಪಠ್ಯ ಪುಸ್ತಕವಾಗಿ ಪ್ರಕಟವಾಗಿದೆ. ಕಸಾಪ ಮತ್ತು ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕೆಲ ವಿಶ್ವವಿದ್ಯಾಲಯಗಳ ಪ್ರಸಾರಾಂಗಗಳ ಪುಸ್ತಕಗಳಲ್ಲಿ ಇವರ ಮೂವತ್ತಕ್ಕೂ ಹೆಚ್ಚು ಸಂಶೋಧನಾತ್ಮಕ ಲೇಖನಗಳು ಪ್ರಕಟಗೊಂಡಿವೆ. ಗುಲ್ಬರ್ಗ ವಿಶ್ವವಿದ್ಯಾಲಯ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ಪರೀಕ್ಷಾ ಮಂಡಳಿ ಹಾಗೂ ಮೌಲ್ಯಮಾಪನ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ `ಗ್ರಾಮ ಚರಿತ್ರೆ ಕೋಶ' ಸಂಶೋಧನಾ ಯೋಜನೆಯಲ್ಲಿ ಹುಮನಾಬಾದ ತಾಲೂಕಿನ ಕ್ಷೇತ್ರ ತಜ್ಞ ಸಹಾಯಕರಾಗಿ ಕಾರ್ಯನಿರ್ವಹಿಸುತಿದ್ದಾರೆ. ಇವರಿಗೆ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ `ಪಾರ್ತಿಸುಬ್ಬ’ ರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನಿಂದ ಅಣ್ಣಾ ಹಜಾರೆ ಪ್ರಶಸ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಬಿ.ಎಂ.ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ