ಪುಟಗಳು

ಮಂಗಳವಾರ, ಜನವರಿ 14, 2025

ಡಾ.ರಾಮಚಂದ್ರ ಗಣಾಪೂರ

ಸಾಹಿತಿ ಡಾ.ರಾಮಚಂದ್ರ ಗಣಾಪೂರ. ರವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೆಪೇಟ್ ಗ್ರಾಮದ ಭೀಮಣ್ಣ ಮತ್ತು ಈರಮ್ಮ ದಂಪತಿಗಳಿಗೆ ದಿನಾಂಕ ೧೫-೦೨-೧೯೭೫ರಲ್ಲಿ ತನ್ನ ತಾಯಿ ತವರುಮನೆ ಹುಮನಾಬಾದ ತಾಲೂಕಿನ ಹುಡಗಿ ಗ್ರಾಮದಲ್ಲಿ ಜನಿಸಿದ್ದಾರೆ. ಎಂ.ಎ. ಎಂ. ಫೀüಲ್., ಪಿ.ಹೆಚ್.ಡಿ. ಪದವಿಧರರಾದ ಇವರು ಬೀದರದ ಜ್ಞಾನಕಾರಂಜಿ ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಎಂಟು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯದಲ್ಲಿ ತುಂಬ ಆಸಕ್ತರಾದ ಇವರು `ನಿಮ್ಮೊಡನಿದ್ದೂ ನಿಮ್ಮಂತಾಗದೆ', `ತನುವೆಂಬ ಮನೆಯೊಳಗೆ,' `ಸಾಹಿತ್ಯ ಸಮೀಕ್ಷೆ,' `ಶಿಷ್ಯನೆಂಬಾ ವನಕ್ಕೆ', `ನಿತ್ಯೋತ್ಸವದ ಕವಿ ನಿಸಾರ್ ಅಹಮದ್', `ನಾಗಾರ್ಜುನ ಕಾಳಗ', `ಗುಲಬರ್ಗಾ ಜಿಲ್ಲೆಯ ಆಧುನಿಕ ವಚನ ಸಾಹಿತ್ಯ', `ಸುವರ್ಣ ದಾಂಪತ್ಯ', `ಕ್ವಾಟಿ ಜಾನಪದ', `ಸೌಮ್ಯ ಸಿರಿ.’ ಇತ್ಯಾದಿ ೧೪ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ಕಲಬುರಗಿ ಹಾಗೂ ರಾಯಚೂರು ಆಕಾಶವಾಣಿಯಿಂದ ಅನೇಕ ಕಾರ್ಯಕ್ರಮಗಳು ಬಿತ್ತರಗೊಂಡಿವೆ. ಮತ್ತು ರಾಷ್ಟಿçÃಯ ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳು ಸೇರಿದಂತೆ ಹಲವಾರು ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ದೆಹಲಿಯ ವತಿಯಿಂದ ಡಾ. ಅಂಬೇಡ್ಕರ್ ಫೆಲೋಶಿಪ್ ಪ್ರಶಸ್ತಿ, ಕವಿ ಸೂರ್ಯ ಪ್ರಶಸ್ತಿ, ಕಲ್ಯಾಣ ಚನ್ನಶ್ರೀ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಮತ್ತು `ಸ್ನೇಹಗಂಗಾ' ಮಾಸಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ