ಸೋಮವಾರ, ಜನವರಿ 20, 2025
ಪ್ರಿಯಾ ಲಂಜವಾಡಕರ್
ಉದಯೋನ್ಮುಖ ಕಾದಂಬರಿಗಾರ್ತಿ ಪ್ರಿಯಾ ಲಂಜವಾಡಕರ್. ಇವರು ಬೀದರ ಜಿಲ್ಲೆ ಹುಮನಾಬಾದಿನ ಮಾರುತಿರಾವ ಮತ್ತು ಸುಮಂಗಲಾ ದಂಪತಿಗಳಿಗೆ ದಿನಾಂಕ ೧-೪-೧೯೮೫ರಲ್ಲಿ ಜನಿಸಿದ್ದಾರೆ. ಆಂಗ್ಲ ಭಾಷೆಯಲ್ಲಿ ಎಂ.ಎ. ಬಿ,ಇಡಿ ಸ್ನಾತಕೋತ್ತರ ಪದವಿ ಪಡೆದ ಇವರು ಹುಮನಾಬಾದ ತಾಲೂಕಿನ ಬೇಮಳಖೇಡ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತರಾಗಿ ಕಾದಂಬರಿ ಓದುವ ಅಭ್ಯಾಸ ಬೆಳೆಸಿಕೊಂಡಿದ್ದ ಇವರು ಮುಂದೆ ಸ್ವತಃ ಕಾದಂಬರಿ ಬರೆದು ೨೦೧೫ರಲ್ಲಿ `ತಲ್ಲಣಿಸದಿರು...’ ಎಂಬ ಕಾದಂಬರಿ ಪ್ರಕಟಿಸಿದ್ದಾರೆ. ಇವರ ಕವನ, ಲೇಖನ, ಬರಹಗಳು ಬೀದರದ `ಸಾಹಿತ್ಯ ಸಿಂಚನ’ ಎಂಬ ತ್ರೈಮಾಸಿಕ ಸೇರಿದಂತೆ ಕನ್ನಡದ ಕೆಲ ಸ್ಥಳಿಯ ಪತ್ರಿಕೆಗಳಲ್ಲಿ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರಿಗೆ ಹುಮನಾಬಾದಿನ ಸಾಕ್ಷಿ ಪ್ರತಿಷ್ಠಾನದ ವತಿಯಿಂದ ಸಿದ್ಧಾರ್ಥ ಪ್ರಶಸ್ತಿಯು ನೀಡಿ ಗೌರವಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ