ಪುಟಗಳು

ಮಂಗಳವಾರ, ಜನವರಿ 14, 2025

ಸಂಗಮೇಶ ಎನ್.ಜವಾದಿ

ಹವ್ಯಾಸಿ ಬರಹಗಾರ ಸಂಗಮೇಶ ಎನ್.ಜವಾದಿ. ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದ ನಾಗಶೆಟ್ಟಿ ಹಾಗೂ ಸರಸ್ವತಿ ದಂಪತಿಗಳಿಗೆ ದಿನಾಂಕ ೨-೮-೧೯೮೪ರಲ್ಲಿ ಜನಿಸಿದ್ದಾರೆ. ಬಿ.ಎಸ್ಸಿ.ಎಂ.ಎಸ್ಸಿ. ಎಚ್.ಆರ್.ಎಂ.ಕAಪ್ಯೂಟರ್ ಅಪ್ಲಿಕೇಶನ್ ಡಿಪ್ಲೊಮಾ ಆಗ್ರಿ ಪದವಿಧರರಾದ ಇವರು ಕೃಷಿ ಮತ್ತು ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ತೊಡಗಿ, ಕವನ ಲೇಖನಗಳನ್ನು ಬರೆಯುತ್ತಿದ್ದಾರೆ. ಮತ್ತು ಹಲವಾರು ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ, ಸೇವೆ ಸಲ್ಲಿಸಿದ್ದು, ನೂರಾರು ಲೇಖನ ಬರಹಗಳನ್ನು ಬರೆದಿದ್ದು, ಅವು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅಷ್ಟೇಯಲ್ಲದೆ ಇವರು ಚಿಟಗುಪ್ಪ ತಾಲೂಕಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಬೀದರ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಹಾಗೂ ಜಿಲ್ಲೆಯ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಅಭಿಯಾನ ಸಮಿತಿಯ ಅಧ್ಯಕ್ಷರಾಗಿಯು ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬರೆದ ಲೇಖನಗಳ ಪುಸ್ತಕವು ಸದ್ಯದಲ್ಲಿಯೆ ಪ್ರಕಟಿಸಲಿದ್ದಾರೆ. ಇವರಿಗೆ ರಾಜ್ಯ ಮಟ್ಟದ ವಿವಿಧ ೨೩ಕ್ಕೂ ಹೆಚ್ಚು ಪ್ರಶಸ್ತಿಗಳು ಹಾಗೂ ೮೦ಕ್ಕೂ ಹೆಚ್ಚು ಬಹುಮಾನಗಳು ಲಭಿಸಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ