ಪುಟಗಳು

ಮಂಗಳವಾರ, ಜನವರಿ 14, 2025

ವಿದ್ಯಾ ಸಾಗರ

ಯುವ ಬರಹಗಾರ ವಿದ್ಯಾಸಾಗರ ರವರು ಬೀದರ ತಾಲೂಕಿನ ಮರಖಲ ಗ್ರಾಮದ ಶರಣಪ್ಪಾ ಮತ್ತು ಕಸ್ತೂರಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೮೮ರಲ್ಲಿ ಜನಿಸಿದ್ದಾರೆ. ಬಿ.ಎ.ಪದವಿಧರರಾದ ಇವರು ಸ್ವಯಂ ವೃತ್ತಿಯೊಂದಿಗೆ ಸಾಹಿತ್ಯ ರಚನೆಯಲ್ಲಿ ತೊಡಗಿ ಅನೇಕ ಕವನ, ಲೇಖನ, ಹನಿಗವನ, ಚುಟುಕು ಮೊದಲಾದವು ಬರೆದಿದ್ದಾರೆ. ಮತ್ತು ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ಬೀದರ ಜಿಲ್ಲೆಯ ವಿವಿಧ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಮೊದಲಾದ ಕವಿಗೋಷ್ಠಿಗಳಲ್ಲಿ ಪಾಲ್ಗೊಂಡು ಕವನ ವಾಚನ ಮಾಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ