ಶುಕ್ರವಾರ, ಜನವರಿ 10, 2025
ಗೀತಾಂಜಲಿ ಎಸ್.ಪಾಟೀಲ್
ಉದಯೋನ್ಮುಖ ಯುವ ಬರಹಗಾರ್ತಿಯಾದ ಗೀತಾಂಜಲಿ ಎಸ್.ಪಾಟೀಲ್. ರವರು ಬೀದರ ಜಿಲ್ಲೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದ ಚನ್ನಪ್ಪ ಮತ್ತು ವಿದ್ಯಾವತಿ ದಂಪತಿಗಳಿಗೆ ದಿನಾಂಕ ೧-೬-೧೯೮೩ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ.ಇಡಿ ಪದವಿಧರರಾದ ಇವರು ೨೦೦೫ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ನಂತರ ಬಡ್ತಿ ಹೊಂದಿ ಹುಮನಾಬಾದ ತಾಲೂಕಿನ ಉಡಮನಳ್ಳಿ ಸರ್ಕಾರಿ ಪ್ರೌಢ ಶಾಲಾ ಶಿಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ತುಂಬ ಆಸಕ್ತರಾಗಿದ್ದ ಇವರು ಶಿಕ್ಷಕ ವೃತ್ತಿಯೊಂದಿಗೆ ಸಾಹಿತ್ಯ ರಚಿನೆಯಲ್ಲಿ ತೊಡಗಿ ೨೦೧೭ರಲ್ಲಿ `ಬಾಡದಿರಲಿ ಭಾವ ಕುಸುಮ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಈ ಕೃತಿಗೆ ೨೦೧೬ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೊತ್ಸಾಹಧನವು ಲಭಿಸಿದೆ. ಇವರು ಹಿಂದಿಯಲ್ಲಿಯು ಕೆಲ ಬರಹಗಳು ಬರೆದಿದ್ದು ಅವು ಅಪ್ರಕಟಿತವಾಗಿವೆ. ಇವರ ಕವನ ಲೇಖನ, ಬರಹಗಳು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ