ಭಾನುವಾರ, ಜನವರಿ 12, 2025
ಕಂಟೆಪ್ಪ ಗುಮ್ಮೆ
ಸಾಹಿತಿ ಕಂಟೆಪ್ಪ ಗುಮ್ಮೆಯವರು. ಬೀದರ ತಾಲೂಕಿನ ಸಿಪ್ಪಗೇರಾ ಗ್ರಾಮದ ತಿಪ್ಪಣ್ಣ ಮತ್ತು ಕಲ್ಲಮ್ಮ ದಂಪತಿಗಳಿಗೆ ದಿನಾಂಕ ೧-೬-೧೯೬೩ರಲ್ಲಿ ಜನಿಸಿದ್ದಾರೆ. ಎಂ.ಎ.ಕನ್ನಡ ಸ್ನಾತಕೋತ್ತರ ಪದವೀಧರರಾದ ಇವರು ಸಮಾಜ ಸೇವಕರಾಗಿ ದುಡಿಯುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯವನ್ನು ಹವ್ಯಾಸಿವಾಗಿ ಬೆಳೆಸಿಕೊಂಡು `ಬದುಕಲು ಬೇಕು ಬಂಗಾರದ ಬಾಳು' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಇವರ ಬರಹಗಳು ನಾಡಿನ ಅನೇಕ ಕಡೆಗಳಲ್ಲಿ ಪ್ರಕಟವಾಗಿವೆ. ಇವರು ಸಮತಾ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಅಧ್ಯಕ್ಷರಾಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ