ಪುಟಗಳು

ಶನಿವಾರ, ಜನವರಿ 11, 2025

ಪರಮೇಶ್ವರ ಶಟಕಾರ

ವೃತ್ತಿಯಲ್ಲಿ ಔಷಧ ವ್ಯಾಪಾರಸ್ಥರಾಗಿ ಪ್ರವೃತ್ತಿಯಲ್ಲಿ ಕವಿ, ಸಾಹಿತಿ, ಲೇಖಕರಾಗಿರುವ ಪರಮೇಶ್ವರ ಶಟಕಾರ. ಇವರು ಬೀದರ ಜಿಲ್ಲೆ ಔರಾದ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದ ಶಿವರುದ್ರಪ್ಪ ಮತ್ತು ಸಂಗಮ್ಮ ದಂಪತಿಗಳಿಗೆ ದಿನಾಂಕ ೧-೬-೧೯೬೬ರಲ್ಲಿ ಜನಿಸಿದ್ದಾರೆ. ಎಂ.ಎ. ಎಲ್.ಎಲ್.ಬಿ. ಡಿ.ಫಾರ್ಮಸಿ ಪದವಿ ಪಡೆದು ಕಲಬುರಗಿಯಲ್ಲಿ ಮೆಡಿಕಲ್ ಔಷಧೀಯ ವ್ಯಾಪಾರಸ್ಥರಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ. ಮತ್ತು ಸಾಹಿತ್ಯದಲ್ಲಿ ಆಸಕ್ತರಾಗಿ ಕವನ, ಲೇಖನ, ಹನಿಗವನ, ಹಾಸ್ಯ ಬರಹಗಳು ಬರೆದು ೧೯೯೩ರಲ್ಲಿ `ಮುನ್ನುಡಿ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.ಮತ್ತು `ಪ್ರೇಮ ಸರಿಗಮ, ಓ ನಲ್ಲೆ, ನನ್ನವ್ವ, ಬಸವ ಜ್ಯೋತಿ, ಕನ್ನಡ ಶಾಯಿರಿ’ ಎಂಬ ಕೃತಿಗಳು. ರಚಿಸಿದ್ದು ಅವು ಅಪ್ರಕಟಿತವಾಗಿವೆ. ಇವರ ಬರಹಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮತ್ತು ವಿವಿಧ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ಉಪನ್ಯಾಸ ಹಾಗೂ ಕವನ ವಾಚನೆ ಮಾಡಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಇವರು ಸಾಮಾಜಿಕ ಕಳಕಳಿಯಿಂದ ೪೦ಕ್ಕೂ ಹೆಚ್ಚು ಸಲ ರಕ್ತದಾನ ಮಾಡಿದ್ದಾರೆ. ಇವರ ಸೇವೆ ಪರಿಗಣಿಸಿ ಹಲವಾರು ಕನ್ನಡಪರ ಸಂಘ ಸಂಸ್ಥೆ ಹಾಗೂ ಮಠಾಧೀಶರು ಕೆಲ ಪ್ರಶಸ್ತಿ ಪುರಸ್ಕಾರಗಳು ನೀಡಿ ಗೌರವಿಸಿದ್ದಾರೆ. ಸದ್ಯ ಇವರು ಕಲಬುರಗಿಯಲ್ಲಿ ವಾಸವಾಗಿದ್ದು ಸಾಹಿತ್ಯ ಕೃಷಿಯನ್ನು ಮುಂದುವರೆಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ