ಶನಿವಾರ, ಜನವರಿ 11, 2025
ಶಿವಶಂಕರ ತರನಳ್ಳಿ
ಪತ್ರಕರ್ತ ಹಾಗೂ ಸಾಹಿತಿಗಳಾದ ಶಿವಶಂಕರ ತರನಳ್ಳಿಯವರು ಬೀದರ ಜಿಲ್ಲೆ ಹುಮನಾಬಾದಿನ ಅಣ್ಣಪ್ಪ ಮತ್ತು ಮಾಣಿಕಮ್ಮ ದಂಪತಿಗಳಿಗೆ ದಿನಾಂಕ ೨೭-೭-೧೯೫೬ರಲ್ಲಿ ಜನಿಸಿದ್ದಾರೆ. ಇಂಗ್ಲೀಷ ಎಂ.ಎ. ಮತ್ತು ಪತ್ರಿಕೋದ್ಯಮ ಪದವಿ ಪಡೆದ ಇವರು ದಶಕಕಿಂತಲೂ ಹೆಚ್ಚು ಕಾಲ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ೧೯೭೫ರ ತುರ್ತು ಪರಿಸ್ಥಿತಿಯಲ್ಲಿ ಪತ್ರಿಕೆಗಳ ಮುದ್ರಣ ಕಾರ್ಯ ಸ್ಥಗಿತಗೊಂಡಿದ್ದರಿAದ `ಸಿಂಹನಾದ’ ಎಂಬ ಕೈ ಬರಹ ಪತ್ರಿಕೆಯ ಸಂಪಾದಕರಾಗಿ, ವರದಿ ಲೇಖನಗಳನ್ನು ಬರೆದು ದಿನನಿತ್ಯ ಜನರಿಗೆ ತಲುಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು `ಐತಿಹಾಸಿಕ ಜಯಸಿಂಹ ನಗರ’ ಎಂಬ ಹುಮನಾಬಾದ ತಾಲೂಕಿನ ಐತಿಹಾಸಿಕ ಪುಸ್ತಕ ಬರೆದು ಪ್ರಕಟಿಸಿದ್ದಾರೆ. ಇವರ ಬರಹಗಳು ಪ್ರಜಾವಾಣಿ ಸುಧಾ ದೂರದರ್ಶನ ಸೇರಿದಂತೆ ಮೊದಲಾದವುಗಳಲ್ಲಿ ಪ್ರಕಟ ಪ್ರಸಾರವಾಗಿವೆ.
ಇವರು ಹುಮನಾಬಾದಿನಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಬಾಲಭಾರತಿ ವಿದ್ಯಾಮಂದಿರ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿ, ಆಂಗ್ಲ ಭಾಷಾ ಶಿಕ್ಷಕರಾಗಿ , ಸಂಪನ್ಮೂಲ ವ್ಯಕ್ತಿಯಾಗಿ, ಸರ್ಕಾರಿ ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರಾಗಿ, ಕನ್ನಡ ಭಾಷಾ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮತ್ತು ಹುಮನಾಬಾದ ಕಸಾಪ ಅಧ್ಯಕ್ಷರಾಗಿ, ಬೀದರ ಜಿಲ್ಲಾ ರಾಷ್ಟ್ರೋತ್ಥಾನ ಪರಿಷತ್ತಿನ ಸಂಚಾಲಕರಾಗಿ, ವಿಕಾಸ ಅಕಾಡೆಮಿ ಶ್ರೀ ಮಾಣಿಕ ಪ್ರಭು ಸಾಹಿತ್ಯ ಸೇವಾ ಪ್ರತಿಷ್ಠಾನದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಹಿತ್ಯ ಹಾಗೂ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಬೀದರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯು ನೀಡಿ ಗೌರವಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ