ಮಂಗಳವಾರ, ಜನವರಿ 14, 2025
ಕೀರ್ತಿಲತಾ ಹೊಸ್ಸಾಳೆ
ಉದಯೋನ್ಮಖ ಬರಹಗಾರ್ತಿಯಾದ ಕೀರ್ತಿಲತಾ ಹೊಸ್ಸಾಳೆ ಯವರು ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದ ಈರಣ್ಣಾ ಮತ್ತು ಸರಸ್ವತಿ ದಂಪತಿಗಳಿಗೆ ೧೫-೬-೧೯೮೦ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಎಡ್ ಪದವಿಧರರಾದ ಇವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸದ್ಯ ಬೀದರದ ಕುಂಬಾರವಾಡ ಕ್ಷೇತ್ರದ ಸಮೂಹ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ರಚನೆಯ ಗೀಳು ಬೆಳೆಸಿಕೊಂಡು ಕವಿತೆ, ಲೇಖನ, ಚುಟುಕು ಮೊದಲಾದ ಬರಹಗಳು ಬರೆದಿದ್ದಾರೆ. ಮತ್ತು ೨೦೦ಕಿಂತಲೂ ಹೆಚ್ಚು ಕವಿತೆಗಳು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ನಾಡಿನ ಹಲವಾರು ಕವಿಗೊಷ್ಠಿಗಳಲ್ಲಿ ಕವನ ವಾಚನೆಯು ಮಾಡಿದ್ದಾರೆ. ಅಷ್ಟೇಯಲ್ಲದೆ ಇವರ ಕವಿತೆಗಳಿಗೆ ವಿವಿಧ ಕಡೆಯಲ್ಲಿ ನಡೆಸಿದ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನವು ಲಭಿಸಿವೆ. ೨೦೧೮ರಲ್ಲಿ ರಾಷ್ಟ್ರೀಯ ಕವಿ ಸಮ್ಮೇಳನದಲ್ಲಿ ಹಾಗೂ ಶಿಕ್ಷಣ ಇಲಾಖೆಯಲ್ಲಿ ಇವರಿಗೆ ಸತ್ಕರಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ