ಪುಟಗಳು

ಮಂಗಳವಾರ, ಜನವರಿ 14, 2025

ಸಿದ್ದಮ್ಮಾ ಹಳಕಾಯಿ

ಕವಯತ್ರಿ ಸಿದ್ದಮ್ಮಾ ಹಳಕಾಯಿ ರವರು ಔರಾದ ತಾಲೂಕಿನ ಮುಧೋಳ ಗ್ರಾಮದ ಧನರಾಜ ಮತ್ತು ಕಸ್ತೂರಿ ದಂಪತಿಗಳಿಗೆ ದಿನಾಂಕ ೫-೬-೧೯೬೯ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಇಡಿ. ಸ್ನಾತಕೋತ್ತರ ಪದವಿಧರರಾದ ಇವರು ಕೊಳ್ಳುರ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕವನ, ಲೇಖನ, ಬುಲಾಯಿ ಪದ, ಹನಿಗವನಗಳು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಹಲವಾರು ಕವಿಗೋಷ್ಠಿಗಳಲ್ಲಿಯೂ ಕವನ ವಾಚನ ಮಾಡಿದ್ದಾರೆ. ಕೆಲ ಕಾಲ ಶಿಕ್ಷಣ ಇಲಾಖೆಯಲ್ಲಿ ಸಿ.ಆರ್.ಪಿಯಾಗಿ ಸೇವೆ ಸಲ್ಲಿಸಿದ ಇವರು ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಮತ್ತು ಬೀದರ ಜಿಲ್ಲಾ ಜಾನಪದ ಪರಿಷತ್ತಿನ ಸದಸ್ಯರಾಗಿ, ಕದಳಿ ವೇದಿಕೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ