ಪುಟಗಳು

ಮಂಗಳವಾರ, ಜನವರಿ 14, 2025

ವೀರಶೇಟ್ಟಿ ವಿ. ಮಲ್ಲಶೇಟ್ಟಿ

ಹವ್ಯಾಸಿ ಬರಹಗಾರ ಹಾಗೂ ಪತ್ರಕರ್ತರಾದ ವೀರಶೆಟ್ಟಿ. ವಿ. ಮಲಶೆಟ್ಟಿ ರವರು ಹುಲಸೂರು ತಾಲೂಕಿನ ಬೇಲೂರು ಗ್ರಾಮದ ವೈಜಿನಾಥ ಮತ್ತು ಸಿದ್ದಮ್ಮ ದಂಪತಿಗಳಿಗೆ ದಿನಾಂಕ ೧-೧೧-೧೯೬೬ರಲ್ಲಿ ಜನಿಸಿದ್ದಾರೆ. ಪಿ.ಯುಸಿ ವರೆಗೆ ಅಧ್ಯಯನ ಮಾಡಿದ ಇವರು ಕರ್ನಾಟಕ ಸಂಧ್ಯಕಾಲ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲೇಖನ ಬರಹಗಳು ಬರೆಯುತ್ತಿರುವ ಇವರು ಕರ್ನಾಟಕ ಸಂಧ್ಯಕಾಲ. ಮಾಹಾಕಯಸ, ಕ್ರಾಂತಿ, ಭಾರತ ವೈಭವ, ಸೇರಿದಂತೆ ಮೊದಲಾದ ಪತ್ರಿಕೆಗಳಲ್ಲಿ ಅವು ಪ್ರಕಟವಾಗಿವೆ. ಇವರಿಗೆ ಬಸವಕಲ್ಯಾಣ ತಾಲೂಕಾ ಆಡಳಿತದಿಂದ `ರಾಜ್ಯೋತ್ಸವ ಪ್ರಶಸ್ತಿ, ಹಾರಕೂಡ ಶ್ರೀಗಳಿಂದ `ಶ್ರೀ ಚನ್ನ ರತ್ನ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಇವರು ಬಸವಕಲ್ಯಾಣ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸದ್ಯ ಬಸವಕಲ್ಯಾಣದಲ್ಲಿ ವಾಸವಾಗಿದ್ದು, ತಮ್ಮ ವೃತ್ತಿಯೊಂದಿಗೆ ಬರವಣಿಗೆಯನ್ನು ಮುಂದುವರೆಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ