ಮಂಗಳವಾರ, ಜನವರಿ 14, 2025
ದಶವಂತ ಬಂಡೆ
ಯುವ ಬರಹಗಾರ ದಶವಂತ ಬಂಡೆಯವರು ಔರಾದ ತಾಲೂಕಿನ ಹಿಪ್ಪಳಗಾಂವ ಗ್ರಾಮದ ಮಾರುತಿ ಮತ್ತು ಖಂಡೋಬಾಯಿ ದಂಪತಿಗಳಿಗೆ ದಿನಾಂಕ ೨೫-೫-೧೯೮೦ರಲ್ಲಿ ಜನಿಸಿದ್ದಾರೆ. ಎಂ.ಎ. ಎಂ.ಫೀಲ್. ಪಿ.ಎಚ್.ಡಿ ಪದವಿಧರರಾದ ಇವರು ೨೦೦೯ರಿಂದ ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕವನ, ಲೇಖನ, ಹನಿಗವನ, ಮೊದಲಾದವು ಬರೆದಿದ್ದಾರೆ. ಮತ್ತು ಅವು ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. `ಕಲ್ಲುಬಂಡೆ' ಎಂಬುದು ಇವರ ವಚನಾಂಕಿತವಾಗಿದೆ. ಉತ್ತಮ ವಾಗ್ಮಿಗಳಾಗಿರುವ ಇವರು ಅನೇಕ ಕಡೆ ಉಪನ್ಯಾಸಗಳನ್ನು ನೀಡಿದ್ದಾರೆ. ಅಷ್ಟೇಯಲ್ಲದೆ ಇವರು ಬಸವಕಲ್ಯಾಣದ ಚುಟುಕು ಕನ್ನಡ ಸಾಹಿತ್ಯ ಪರಿಷತ್ತು, ಧರಿನಾಡು ಕನ್ನಡ ಸಂಘ, ಲೋಹಿಯ ಪ್ರತಿಷ್ಠಾನ, ದಲಿತ ಸಾಹಿತ್ಯ ಪರಿಷತ್ತು ಮೊದಲಾದ ಸಂಘ ಸಂಸ್ಥೆಗಳ ಸಂಚಾಲಕರಾಗಿ, ಗಮಕಕಲಾ ಪರಿಷತ್ತಿನ ಬಸವಕಲ್ಯಾಣ ತಾಲೂಕಾ ಅಧ್ಯಕ್ಷರಾಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ