ಸಾಹಿತಿ ವಿಶ್ವನಾಥ ಬಿರಾದಾರ ಇವರು ಬೀದರ ಜಿಲ್ಲೆ ಹುಲಸೂರು ತಾಲೂಕಿನ ಮುಚಳಂಬ ಗ್ರಾಮದ ಮಾಣಿಕಪ್ಪಾ ಮತ್ತು ಗಂಗಮ್ಮ ದಂಪತಿಗಳಿಗೆ ದಿನಾಂಕ ೮-೭-೧೯೫೮ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಇಡಿ.ಸ್ನಾತಕೋತ್ತರ ಪದವೀಧರರಾದ ಇವರು ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕವನ, ಲೇಖನ, ಬರಹಗಳು ಬರೆದ ಇವರು ೨೦೦೨ರಲ್ಲಿ `ಸರ್ಕಾರಿ ನೌಕರರ ಸ್ಮರಣ ಸಂಚಿಕೆ' ಕೃತಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರ ಹಲವಾರು ಬರಹಗಳು ಅನೇಕ ಕಡೆ ಪ್ರಕಟವಾಗಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ