ಪುಟಗಳು

ಮಂಗಳವಾರ, ಜನವರಿ 14, 2025

ಗೀತಾ ರೆಡ್ಡಿ

ಉದಯೋನ್ಮುಖ ಕವಯತ್ರಿಯಾದ ಗೀತಾ ರೆಡ್ಡಿಯವರು ಹುಮನಾಬಾದ ತಾಲೂಕಿನ ಘಾಟಬೋರಾಳ ಗ್ರಾಮದ ಹನಮಂತರೆಡ್ಡಿ ಮತ್ತು ಕಮಲಾಬಾಯಿ ದಂಪತಿಗಳಿಗೆ ದಿನಾಂಕ ೬-೩-೧೯೮೧ರಲ್ಲಿ ಜನಿಸಿದ್ದಾರೆ. ಬಿ.ಎ.ಬಿ.ಇಡಿ. ಎಂ.ಎಸ್.ಡೆಬ್ಲು ಸ್ನಾತಕೋತ್ತರ ಪದವಿಧರರಾದ ಇವರು ೨೦೦೫ರಿಂದ ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಏಡ್ಸ ನಿಯಂತ್ರಣ ಘಟಕದ ಆಪ್ತ ಸಮಾಲೋಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತರಾದ ಇವರು ಕವನ, ಲೇಖನ, ಆಧುನಿಕ ವಚನ, ಮೊದಲಾದವು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಮತ್ತು ಇವರು ಹಲವಾರು ಕವಿಗೋಷ್ಠಿಗಳಲ್ಲಿಯು ಕವನ ವಾಚನ ಮಾಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ತಮ್ಮ ವೃತ್ತಿ ಬದುಕಿನೊಂದಿಗೆ ವೈದ್ಯಕೀಯ ಲೇಖನಗಳು, ಹಾಗೂ ಆಹಾರ ಮತ್ತು ಆರೋಗ್ಯದ ಕುರಿತು ಮತ್ತು ದಾಂಪತ್ಯ ಜೀವನಕ್ಕೆ ಸಂಬAಧಿಸಿದ ಲೇಖನ, ಕವನ, ಚುಟುಕು, ಹನಿಗವನ ಸೇರಿದಂತೆ ಮೊದಲಾದ ಬರಹಗಳು ಬರೆಯುತ್ತಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ