ಭಾನುವಾರ, ಜನವರಿ 19, 2025
ಡಾ.ವಿಜಯಲಕ್ಷ್ಮೀ ಗಡ್ಡೆ
ಸಾಹಿತಿ ಡಾ.ವಿಜಯಲಕ್ಷ್ಮೀ ಗಡ್ಡೆ ಯವರು ಬೀದರ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರು ಗ್ರಾಮದ ದೇಶಮುಖಪ್ಪಾ ಪಾಟೀಲ್ ಮತ್ತು ಸುಶೀಲಾ ಪಾಟೀಲ್ ದಂಪತಿಗಳಿಗೆ ದಿನಾಂಕ ೧೩-೩-೧೯೬೪ ರಲ್ಲಿ ಜನಿಸಿದ್ದಾರೆ. ಎಂ.ಎಸ್ಸಿ. ಬಿ.ಇಡಿ ಪದವಿಧರರಾದ ಇವರು ಸಾಹಿತಿ ಹಾಗೂ ಪತ್ರಕರ್ತರಾದ ಬಸವಕಲ್ಯಾಣದ ಗುರುನಾಥ ಗಡ್ಡೆಯವರ ಧರ್ಮ ಪತ್ನಿಯಾಗಿದ್ದು, ಭಾಲ್ಕಿಯ ಶ್ರೀ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯ ಗಣಿತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ತುಂಬಾ ಆಸಕ್ತರಾಗಿ, `ಉರಿಲಿಂಗ ಪೆದ್ದಿ ವಚನಗಳಿಗೆ ಭಾವಾರ್ಥ, ಚನ್ನಬಸವ ಪಟ್ಟದೇವರ ಜೀವನ ಚರೀತ್ರೆ,’ ಎಂಬ ಕೃತಿಗಳು ರಚಿಸಿದ್ದಾರೆ. ಮತ್ತು ಹಲವಾರು ಕವನ ಲೇಖನ ಪ್ರಬಂಧಗಳನ್ನು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ಹಲವಾರು ನಾಡಿನ ವಿವಿಧ ಸಾಹಿತ್ಯ ಸಮ್ಮೇಳನ ಹಾಗೂ ವಿಚಾರ ಗೋಷ್ಠಿಗಳಲ್ಲಿ ಪಾಲ್ಗೊಂಡು ಉಪನ್ಯಾಸಗಳು, ೩೦೦ಕ್ಕೂ ಅಧಿಕ ಭಾಷಣಗಳು ಮಾಡಿರುತ್ತಾರೆ. ಭಾಲ್ಕಿ ಮತ್ತು ಬೀದರ ಹಿರೇಮಠಗಳಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರವಚನವು ನೀಡಿದ್ದಾರೆ. ಇವರು ಬಸವಕಲ್ಯಾಣದ ಬಸವೇಶ್ವರ ದೇವಸ್ಥಾನ ಪಂಚ ಕಮೀಟಿ ನಿರ್ದೇಶಕರಾಗಿ, ಹಲವಾರು ಸಂಘ ಸಂಸ್ಥೆಗಳ ಸದಸ್ಯರಾಗಿ ಸೇವೆ ಸಲ್ಲಿಸಿ ಸದ್ಯ ಬೀದರ ಜಿಲ್ಲಾ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ