ಶುಕ್ರವಾರ, ಜನವರಿ 10, 2025
ಅರವಿಂದ ಚಾಂದೆ
ಸೃಜನಶೀಲ ಉದಯೋನ್ಮುಖ ಬರಹಗಾರ ಅರವಿಂದ ಚಾಂದೆಯವರು. ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ ಗ್ರಾಮದ ಶಂಕರ ಚಾಂದೆ ಮತ್ತು ಜ್ಞಾನಬಾಯಿ ದಂಪತಿಗಳಿಗೆ ದಿನಾಂಕ ೧-೭-೧೯೯೦ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಎಡ್.ಮತ್ತು ಎಂ.ಎ.ಪತ್ರಿಕೋದ್ಯಮ, ಮತ್ತು ಸಿನಿಮಾ ನಾಟಕದಲ್ಲಿ ಡಿಪ್ಲೊಮಾ ಪದವಿ ಪಡೆದು ಬಾಹ್ಯವಾಗಿ ಪಿ.ಎಚ್.ಡಿ.ಅಧ್ಯಯನದೊಂದಿಗೆ ಬಸವಕಲ್ಯಾಣ ತಾಲೂಕಿನ ಹಾಮುನಗರದ ಹಿರಿಯ ಪ್ರಾಥಮಿಕ ಶಾಲಾ ಪದವಿಧರ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದ ಗೀಳು ಬೆಳೆಸಿಕೊಂಡ ಇವರು `ಉಲಿದ ಮೌನ', `ಚುಕ್ಕಿಯ ಚಿತ್ತಾರ' ಎಂಬ ಕವನ ಸಂಕಲನಗಳು ಪ್ರಕಟಿಸಿದ್ದಾರೆ. ಮತ್ತು ಇವರ ಬರಹಗಳು ಮೈಸೂರಿನ `ಮೈಸೂರು ಧ್ವನಿ' ಎಂಬ ದಿನಪತ್ರಿಕೆಯಲ್ಲಿ ಪ್ರಕಟವಾಗಿವೆ. ಇವರಿಗೆ ಕರ್ನಾಟಕ ರಾಜ್ಯ ಮಾಧ್ಯಮಿಕ, ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದವತಿಯಿAದ ಬೀದರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ಲಭಿಸಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ